ಅನ್ಯಧರ್ಮೀಯ ಡ್ರಾಪ್ ಕೊಟ್ಟಿದ್ದಕ್ಕೆ ಹಲ್ಲೆ: ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ, ಬೊಮ್ಮಾಯಿ ಖಡಕ್ ಎಚ್ಚರಿಕೆ | ಜನತಾ ನ್ಯೂಸ್
ಬೆಂಗಳೂರು : ನಗರದಲ್ಲಿ ವ್ಯಕ್ತಿಯೋರ್ವ ಬುರ್ಖಾ ಧರಿಸಿದ್ದ ಮಹಿಳೆಯನ್ನ ಬೈಕ್ನಲ್ಲಿ ಡ್ರಾಪ್ ಮಾಡುವ ವೇಳೆ ಅನ್ಯಕೋಮಿನ ಯುವಕರು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ತಕ್ಷಣ ಬಂಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹೊಸೂರು ರಸ್ತೆ ಡೈರಿ ಸರ್ಕಲ್ ಬಳಿ ಅನ್ಯಕೋಮಿನ ಯುವತಿಗೆ ಬೈಕ್ನಲ್ಲಿ ಡ್ರಾಪ್ ಕೊಡುವಾಗ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದ ಸಂಬಂಧ ಇಬ್ಬರನ್ನು ಬಂಧಿಸಲಾಗಿತ್ತು. ಈ ಕುರಿತು ಇಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಸರ್ಕಾರದಲ್ಲಿ ಇಂತಹ ಘಟನೆಗಳಿಗೆ ಅವಕಾಶವಿಲ್ಲ ಎಂದು ಖಡಕ್ ಆಗಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಅನ್ಯಕೋಮಿನ ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಿಸಲಾಗಿದೆ ಮತ್ತು ಕಾನೂನು ಕ್ರಮ ಆರಂಭಿಸಲಾಗಿದೆ. ನನ್ನ ಸರ್ಕಾರ ಇಂತಹ ಘಟನೆಗಳನ್ನು ಕಬ್ಬಿಣದ ಕೈಯಿಂದ ವ್ಯವಹರಿಸುತ್ತದೆ. ಎಂದು ಹೇಳಿದ್ದಾರೆ.