ರಾಜ್ಯದಲ್ಲಿಂದು 818 ಮಂದಿಗೆ ಕೋವಿಡ್ ಸೋಂಕು ದೃಢ, 1,414 ಡಿಸ್ಚಾರ್ಜ್! | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಇಂದು 818 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 21 ಮಂದಿ ಸಾವನ್ನಪ್ಪಿದ್ದು, 1,414 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ತನಕ 29,17,944 ಜನರು ಡಿಸ್ಜಾರ್ಜ್ ಆಗಿದ್ದಾರೆ.
13,741 ಸಕ್ರಿಯ ಪ್ರಕರಣಗಳಿವೆ. 21 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 37,648ಕ್ಕೆ ಏರಿದೆ. ಈ ಮೂಲಕ ಸಾವಿನ ಪ್ರಮಾಣ ಶೇ.2.56ರಷ್ಟಿದೆ.
ಬೆಂಗಳೂರಿನಲ್ಲಿ ಇಂದು 359 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 8 ಜನ ಮರಣ ಹೊಂದಿದ್ದಾರೆ. 381 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬಾಗಲಕೋಟೆ, ಬೀದರ್, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಬಳ್ಳಾರಿ 2, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 359, ಮಂಡ್ಯ 13, ಮೈಸೂರು 71, ಶಿವಮೊಗ್ಗ 17, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 10, ಹಾಸನ 23, ಕಲಬುರಗಿ 4, ಕೊಡಗು 25, ಚಿತ್ರದುರ್ಗ 7, ದಕ್ಷಿಣ ಕನ್ನಡ 114, ದಾವಣಗೆರೆ 8, ಧಾರವಾಡ 6, ಗದಗ 1, ಕೋಲಾರ 10, ತುಮಕೂರು 24, ಉಡುಪಿ 73, ಉತ್ತರ ಕನ್ನಡ 22 ಹಾಗೂ ವಿಜಯಪುರದಲ್ಲಿ 3 ಹೊಸ ಪ್ರಕರಣಗಳು ವರದಿಯಾಗಿವೆ.