ಜಂಟಿ ಸಮಾವೇಶದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಷಣ : ಕಾಂಗ್ರೆಸ್ ಬಹಿಷ್ಕಾರ - ಸಿದ್ದರಾಮಯ್ಯ | ಜನತಾ ನ್ಯೂಸ್
ಬೆಂಗಳೂರು : ಇಂದು ಶುಕ್ರವಾರ ಮಧ್ಯಾಹ್ನ ನಡೆಯುತ್ತಿರುವ ಜಂಟಿ ಸಮಾವೇಶದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಭಾಷಣವನ್ನು ಬಹಿಷ್ಕರಿಸುವುದಾಗಿ ರಾಜ್ಯದ ಕಾಂಗ್ರೆಸ್ ಪಕ್ಷವು ನಿರ್ಧರಿಸಿದೆ.
ಇಂದು ಲೋಕಸಭಾ ಸ್ಪೀಕರ್ ಭಾಷಣ ಮಾಡಲಿರುವ ಜಂಟಿ ಅಧಿವೇಶನವನ್ನು ಬಹಿಷ್ಕರಿಸುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷ ತೆಗೆದುಕೊಂಡಿದೆ. ಬಿಜೆಪಿ ಸರ್ಕಾರವು ಕರ್ನಾಟಕ ವಿಧಾನಸಭೆಯಲ್ಲಿ ಹೊಸ ಉದಾಹರಣೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಇದು ಹಿಂದೆಂದೂ ಸಂಭವಿಸಿಲ್ಲ, ಎಂದು ರಾಜ್ಯ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ರಾಜ್ಯದ ಶಾಸಕರನ್ನು ಉದ್ದೇಶಿಸಿ ರಾಷ್ಟ್ರಪತಿ ಅಥವಾ ರಾಜ್ಯಪಾಲರನ್ನು ಹೊರತುಪಡಿಸಿ ಬೇರೆ ಯಾರಿಗೂ ಅವಕಾಶವಿಲ್ಲದ ಕಾರಣ ಅವರ ಪಕ್ಷವು ಭಾಷಣಕ್ಕೆ ಹಾಜರಾಗುವುದಿಲ್ಲ, ಎಂದು ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಹೇಳಿದರು. ಪ್ರತಿಪಕ್ಷದವರನ್ನೂ ಸಂಪರ್ಕಿಸದೆ ಯೋಜಿಸಲಾಗಿದೆ, ಎಂದು ಅವರು ತಿಳಿಸಿದ್ದಾರೆ.
ಇದು ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಶಕ್ತಿಶಾಲಿಗೊಲಿಸುವತ್ತ ಒಂದು ಹೆಜ್ಜೆಯಾಗಿದೆ. ಅವರು(ಕಾಂಗ್ರೆಸ್) ಭಾಗವಹಿಸುವ ಅಗತ್ಯವಿದೆ. ಇದರಲ್ಲಿ ತಪ್ಪೇನಿದೆ? ಇದು ಯಾರ ವಿರುದ್ಧವೂ ಅಲ್ಲ, ಜನರು ಮತ್ತು ಶಾಸಕರು ಸಂವಾದ ಮತ್ತು ಆಲಿಸುವುದ ಉದ್ದೇಶ ಇದಾಗಿದೆ, ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಹೇಳಿರುವುದಾಗಿ ಎಏನ್ಐ ಪ್ರಕಟಿಸಿದೆ.