ಕುಡಿದ ಅಮಲಿನಲ್ಲಿ ಮರದ ಮೇಲೆ ಸೆಲ್ಫಿ ತೆಗೆಯಲು ಹೋಗಿ ನೀರುಪಾಲಾದ ಯುವಕ! | ಜನತಾ ನ್ಯೂಸ್
ಚಿಕ್ಕಬಳ್ಳಾಪುರ : ಬರ್ತ್ ಡೇ ಪಾರ್ಟಿ ವೇಳೆ ಫೋಟೋ-ವಿಡಿಯೋ ಕ್ರೇಜ್ಗೆ ಕುಡಿದ ಅಮಲಿನಲ್ಲಿ ಮರದ ಮೇಲೆ ಹತ್ತಿದ ಯುವಕನೊಬ್ಬ ಜಲಾಶಯದ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ಯುವಕ ಬೆಂಗಳೂರಿನ ಸುಂಕದಕಟ್ಟೆಯ ನಿವಾಸಿ ರೋಹಿತ್(24) ಎಂದು ಗುರುತಿಸಲಾಗಿದೆ.
ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ರೋಹಿತ್ ಚಿಕ್ಕಬಳ್ಳಾಪುರದಲ್ಲಿರುವ ಸ್ನೇಹಿತ ಸಂತೋಷನ ಬರ್ತ್ ಡೇ ಪಾರ್ಟಿ ಆಚರಣೆಗೆ ಐವರು ಸ್ನೇಹಿತರೊಂದಿಗೆ ಜಕ್ಕಲಮಡಗು ಜಲಾಶಯಕ್ಕೆ ಬಂದಿದ್ದರು.
ಈಜು ಬರದಿದ್ರೂ ನೀರಿಗೆ ಇಳಿದಿದ್ದ ಸ್ನೇಹಿತರು, ಜಲಾಶಯದ ಹಿನ್ನೀರಿನಲ್ಲಿರುವ ಮರದಲ್ಲಿ ಹತ್ತಿ ಸೆಲ್ಪಿ ಪೋಟೊ-ವಿಡಿಯೋ ಮಾಡಿಕೊಳ್ಳುತ್ತಿದ್ದರು. ಕುಡಿದ ಅಮಲಿನಲ್ಲಿ ಮರದ ಮೇಲೆ ಹತ್ತಿದ ರೋಹಿತ್ ಆಯತಪ್ಪಿ ನೀರಿಗೆ ಬಿದ್ದಿದ್ದ ರೋಹಿತ್ ನೀರಿನಲ್ಲಿ ಮುುಳುಗಿ ಸಾವನ್ನಪ್ಪಿದ್ದಾರೆ.
ಸದ್ಯ ಘಟನಾ ಸ್ಥಳಕ್ಕೆ ಆಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ರೋಹಿತ್ ಮೃತದೇಹವನ್ನು ಪತ್ತೆ ಮಾಡಿ ಹೊರ ತೆಗೆದಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.