Fri,Apr26,2024
ಕನ್ನಡ / English

ವಿಶ್ವಸಂಸ್ಥೆಯಲ್ಲಿ ಪಿಓಕೆ ಹಿಂತಿರುಗಿಸುವಂತೆ ಹೇಳಿ, ಪಾಕ್, ಅದರ ಪ್ರಧಾನಿ ಇಮ್ರಾನ್ ಖಾನ್ ಮುಖಭಂಗ ಮಾಡಿದ ಭಾರತ | ಜನತಾ ನ್ಯೂಸ್

26 Sep 2021
1652

ನ್ಯೂಯಾರ್ಕ್ : ವಿಶ್ವಸಂಸ್ಥೆಯಲ್ಲಿ ಭಾರತವು, ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ ಮತ್ತೊಮ್ಮೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮತ್ತೊಮ್ಮೆ ಸುಳ್ಳು ಮಾತನಾಡುವ ಮೂಲಕ ವಿಶ್ವಸಂಸ್ಥೆಯ ಮಹಾನ್​ ವೇದಿಕೆಯ ಘನತೆಗೆ ಧಕ್ಕೆ ತಂದಿದ್ದಾರೆ. ಎಂದು ಹೇಳಿದ್ದಾರೆ ಅಲ್ಲದೇ, ಪಾಕಿಸ್ತಾನ ಅಕ್ರಮವಾಗಿ ವಶ ಪಡಿಸಿಕೊಂಡಿರುವ ಕಾಶ್ಮೀರದ ಭಾಗವನ್ನು ಭಾರತಕ್ಕೆ ಹಸ್ತಾಂತರಿಸುವಂತೆ ತಾಕಿತು ಮಾಡಿ ಪಾಕಿಸ್ತಾನಕ್ಕೆ ಹಾಗೂ ಅದರ ಪ್ರಧಾನಿ ಇಮ್ರಾನ್ ಖಾನ್ ಗೆ ಭಾರಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮುಖಭಂಗ ಮಾಡಿದೆ.

ಪಾಕಿಸ್ತಾನ ಉಗ್ರರರ ಪೋಷಕ ಎಂಬುದನ್ನೂ ಭಾರತ ಒತ್ತಿ ಹೇಳಿದೆ. ಪಾಕಿಸ್ತಾನ ತನ್ನ ನೆಲದಲ್ಲಿ ಭಯೋತ್ಪಾದನೆಯನ್ನು ಬೆಳೆಸುತ್ತಿದೆ ಎಂಬುದು ಜಗತ್ತಿಗೇ ಗೊತ್ತಿರುವ ವಿಚಾರ. ಪಾಕ್​ನ ಈ ನೀತಿಯಿಂದಾಗಿ ನಮ್ಮ ನೆಲವಷ್ಟೇ ಅಲ್ಲ, ಇಡೀ ಜಗತ್ತು ಸಂಕಷ್ಟಕ್ಕೀಡಾಗಿದೆ. ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಪಾಕಿಸ್ತಾನದಲ್ಲಿ ಆಶ್ರಯ ಪಡೆದಿದ್ದನು. ಇನ್ನು ಪಾಕಿಸ್ತಾನದ ಒಳಗೆ ನಡೆಯುತ್ತಿರುವ ಮತಾಂಧತೆಯ ಹಿಂಸಾಚಾರವನ್ನೂ ಕೂಡ ಅವರು ಉಗ್ರರ ಕೃತ್ಯ ಎಂದೇ ಬಿಂಬಿಸಿಕೊಳ್ಳುತ್ತಿದ್ದಾರೆ, ಎಂದು ಸಭೆಗೆ ತಿಳಿಸಿದೆ.

ವಿಶ್ವಸಂಸ್ಥೆಯಲ್ಲಿ ಮಾತನಾಡಿದ ಭಾರತದ ಪ್ರತಿನಿಧಿ ಸ್ನೇಹಾ ದುಬೆ ಅವರು, ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ ಮತ್ತೊಮ್ಮೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನನ್ನ ದೇಶ ಭಾರತದ ಆಂತರಿಕ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ಮೂಲಕ ವಿಶ್ವಸಂಸ್ಥೆಯ ಮಹಾನ್​ ವೇದಿಕೆಯ ಘನತೆಗೆ ಧಕ್ಕೆ ತಂದಿದ್ದಾರೆ. ಜಾಗತಿಕ ವೇದಿಕೆಯಲ್ಲಿ ಮತ್ತೊಮ್ಮೆ ಸುಳ್ಳು ಹೇಳಿದ್ದಾರೆ ಎಂದು ಹೇಳಿದರು. ಅಷ್ಟೇ ಅಲ್ಲ, ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು-ಕಾಶ್ಮೀರ ಮತ್ತು ಲಡಾಖ್​ಗಳು ಯಾವಾಗಲೂ ನಮ್ಮ ಭಾರತದ ಅವಿಭಾಜ್ಯ ಪ್ರದೇಶಗಳು. ಅದನ್ನು ಭಾರತದಿಂದ ಬೇರ್ಪಡಿಸಲು ಯಾರಿಗೂ, ಯಾವಾಗಲೂ ಸಾಧ್ಯವಿಲ್ಲ. ಪಾಕಿಸ್ತಾನ ಕಾನೂನು ಬಾಹಿರವಾಗಿ ವಶಪಡಿಸಿಕೊಂಡಿರುವ ಕಾಶ್ಮೀರದ ಭಾಗಗಳೂ ಕೂಡ ಭಾರತದ್ದೇ ಆಗಿದೆ. ಹೀಗೆ ಅಕ್ರಮವಾಗಿ ವಶಪಡಿಸಿಕೊಂಡಿರುವ ಪ್ರದೇಶಗಳಿಂದ ಕೂಡಲೇ ಪಾಕಿಸ್ತಾನ ಜಾಗ ಖಾಲಿ ಮಾಡಬೇಕು ಎಂದು ಆಗ್ರಹಿಸುತ್ತೇನೆ, ಎಂದು ಕಟುವಾಗಿ ಹೇಳಿದ್ದಾರೆ.

ಭಾರತ ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಪಾಕಿಸ್ತಾನ ಪ್ರಧಾನಿ ಸಂಕಟ ಹೆಚ್ಚಾಗಿದೆ. ಅವಕಾಶ ಸಿಕ್ಕಾಗಲೆಲ್ಲ ಈ ಬಗ್ಗೆ ಮಾತನಾಡುತ್ತಾರೆ. ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕಾಶ್ಮೀರದ ಬಗ್ಗೆ ಮಾತನಾಡುತ್ತಿರುವುದು ಇದೇ ಮೊದಲಲ್ಲ. ಹಿಂದೆ ಕೂಡ ಮಾತನಾಡಿದ್ದರು. ಆದರೆ ವಿಶ್ವ ಸಂಸ್ಥೆ ಸದಸ್ಯ ರಾಷ್ಟ್ರಗಳು ಈ ವಿಚಾರದಲ್ಲಿ ನಾವು ತಲೆ ಹಾಕೋದಿಲ್ಲ, ಇದು ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ವಿಷಯ ಎಂದು ಹೇಳಿದ್ದವು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಿನ್ನೆ ಮಾತನಾಡಿದ್ದ ಪಾಕ್​ ಪ್ರಧಾನಿ ಇಮ್ರಾನ್ ಖಾನ್​, ಜಮ್ಮು-ಕಾಶ್ಮೀರವನ್ನು ಪ್ರಸ್ತಾಪಿಸಿದ್ದರು. 2019ರ ಆಗಸ್ಟ್​ 5ರಂದು ಭಾರತ ಸರ್ಕಾರ ಅಲ್ಲಿನ ವಿಶೇಷ ಸ್ಥಾನಮಾನ ತೆಗೆದು, ಜಮ್ಮು-ಕಾಶ್ಮೀರ ಮತ್ತು ಲಡಾಖ್​​ನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ರೂಪಿಸಿದ್ದರ ಬಗ್ಗೆ ಮಾತನಾಡಿದ್ದರು. ಅಷ್ಟೇ ಅಲ್ಲ, ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್​ ಅಲಿ ಗೀಲಾನಿಯವರ ಸಾವಿನ ಬಗ್ಗೆಯೂ ಪ್ರಸ್ತಾಪ ಮಾಡಿದ್ದರು.

RELATED TOPICS:
English summary :India faced off Pak & PM Imran Khan - says to return PoK

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...