Thu,May09,2024
ಕನ್ನಡ / English

ಮೋದಿಯವರ ಕೃಷಿ ಮೇಲಿನ ಹಂಬಲವನ್ನು ಜನತೆ ಬೆಂಬಲಿಸಿದ್ದಾರೆ! | ಜನತಾ ನ್ಯೂಸ್

27 Sep 2021
3203

ಬೆಂಗಳೂರು : ಇಂದು ಕರೆ ನೀಡಿದ್ದ ಭಾರತ್​ ಬಂದ್​ ವಿಫಲವಾಗಿದೆ. ಪ್ರಧಾನಿ ನರೇಂದ್ರ ಮೋದಿ ಬೆಂಬಲಕ್ಕೆ ರೈತರಿದ್ದಾರೆ ಅನ್ನುವುದು ಗೊತ್ತಾಗಿದೆ. ತಮ್ಮ ಬೇಳೆ ಬೇಯಿಸಿಕೊಳ್ಳಲು ಹೋರಾಟ ಮಾಡಿದ್ದರು. ಬಿಜೆಪಿ ರೈತರ ವಿರೋಧಿ ಎಂದು ಬಿಂಬಿಸಲು ಷಡ್ಯಂತ್ರ ರೂಪಿಸಲಾಗಿತ್ತು. ಮೋದಿಯವರ ಕೃಷಿ ಮೇಲಿನ ಹಂಬಲವನ್ನು ಜನತೆ ಬೆಂಬಲಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

100 ಕ್ಕೂ ಹೆಚ್ಚಿನ ಸಂಘಟನೆಗಳು ಬಂದ್​​ಗೆ ಕರೆ ನೀಡಿದ್ದು ನನಗೂ ಆತಂಕ ಇತ್ತು, ಆದರೆ ಇದಕ್ಕೆ ಜನತೆ ಬೆಂಬಲ ನೀಡಿಲ್ಲ. ಹೀಗಾಗಿ ರಾಜಕೀಯ ಅರಾಜಕತೆ ಸೃಷ್ಟಿಸಿ ಲಾಭ ಪಡೆಯುವವರ ಉದ್ದೇಶ ವಿಫಲವಾಗಿದೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್​ ವಿರುದ್ಧ ರವಿ ವಾಗ್ದಾಳಿ ನಡೆಸಿದರು.

ಕೊವಿಡ್ ಕಾರಣಕ್ಕೆ ಬೆಲೆ ಏರಿಕೆಯಾಗಿದೆ. ನಾವು ಅಡಿಕೆ ಬೆಳೆಯುತ್ತೇವೆ. ಯಾವ ಕಾಲಕ್ಕೆ ಸಿಗದ‌ ಬೆಲೆ ಇವಾಗ ನಮಗೆ ಅಡಿಕೆಗೆ ಬೆಲೆ ಸಿಕ್ಕಿದೆ. ರೈತರಿಗೆ 6000 ಹಣವನ್ನು ಸಿದ್ದರಾಮಯ್ಯ ಹಾಕಿದ್ರಾ? ಅದನ್ನು ಮೋದಿ ಹಾಕಿರೋದು. ಬೇರೆ ದೇಶಗಳಿಗೆ ಹೋಲಿಸಿದ್ರೆ ನಮ್ ದೇಶದ ಜಿಡಿಪಿ ಚೆನ್ನಾಗಿದೆ. ಸಿದ್ದರಾಮಯ್ಯ ಮತ್ತೆ ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಎಂದು ಸಿ.ಟಿ. ರವಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಬೆಂಬಲ ಬೆಲೆಗೆ 40 ಸಾವಿರ ಕೋಟಿ ಇಟ್ಟಿದ್ರು, ಆದರೆ ನಾವು 1 ಲಕ್ಷ 20 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದೇವೆ. ಆದರೆ, ಮಸಾಲ ದೋಸೆ ಬೆಲೆ ಹೆಚ್ಚಿದೆ ಎಂದು ಹೇಳುವ ಸಿದ್ದರಾಮಯ್ಯನವರಿಗೆ ಬೆಂಬಲ ಬೆಲೆ ಹೆಚ್ಚು ಮಾಡಿರುವ ಬಗ್ಗೆ ಜಾಣಮರೆವು. ಕೇವಲ ಬಿಜೆಪಿ ರೈತ ವಿರೋಧಿ ಎಂದು ಬಿಂಬಿಸುವುದೇ ಅವರ ಉದ್ದೇಶ ಎಂದು ಕಿಡಿಕಾರಿದರು.

ಸುಧಾರಣೆಯ ಲಾಭ ರೈತನಿಗೆ ಸಿಗಬಾರದ? ಕೃಷಿಕ ತನ್ನ ಆದಾಯ ಎರಡು ಪಟ್ಟು ಮಾಡಿಕೊಳ್ಳುವುದು ತಪ್ಪಾ? ನಮ್ಮ ಸರ್ಕಾರ ಕೃಷಿಕರ ಆದಾಯ ಎರಡು ಪಟ್ಟು ಮಾಡುವುದು, ಕೃಷಿಗೆ ಬಂಡವಾಳ ಹೂಡುವುದು, ಕೃಷಿಕ ಊರು ಬಿಟ್ಟು ಹೋಗುವುದನ್ನು ತಪ್ಪಿಸುವುದು ಮುಂತಾದ ಗುರಿ ಹೊಂದಿದೆ.

ಆದರೆ, ಕೃಷಿಕರನ್ನು ಅಭಿವೃದ್ಧಿ ಪಡಿಸುವುದೇ ತಪ್ಪು ಎಂದು ಬಿಂಬಿಸಲು ಹೊರಟಿದ್ದಾರೆ. ಹೆಗ್ಗಣದ ರೀತಿಯಲ್ಲಿ ಕೊಬ್ಬಿದ ದಲ್ಲಾಳಿಗಳಿಗೆ ಇದರಿಂದ ತೊಂದರೆ ಆಗುತ್ತೆ. ರೈತ ಎಲ್ಲಿ ಬೇಕಾದರೂ ತನ್ನ ಬೆಳೆ ಮಾರಾಟ ಮಾಡಬಹುದು. ಇದರಿಂದ ದಲ್ಲಾಳಿಗಳಿಗೆ ತೊಂದರೆ ಆಗುತ್ತೆ. ಕಾಂಗ್ರೆಸ್‌ನವರು ದಲ್ಲಾಳಿಗಳ ಪರ ಹೋರಾಟ ಮಾಡ್ತಿದ್ದಾರೆ ಎಂದು ಆರೋಪಿಸಿದರು.

ಕೃಷಿ ಕಾರ್ಮಿಕರಿಗೂ ಪಿಂಚಣಿ ವ್ಯವಸ್ಥೆ ತರಬೇಕೆಂಬ ಚಿಂತನೆ ನರೇಂದ್ರ ಮೋದಿಯವರಿಗೆ ಇದೆ. ಅದಾನಿ, ಅಂಬಾನಿ ಪರ ಎಂದು ಹೇಳುತ್ತಾರೆ. ಇವರು ಈಗ ಬಂದವರೇನು? ಹಿಂದೇ ಇವರು ಇರಲಿಲ್ವಾ? ನರೇಂದ್ರ ಮೋದಿಯವರು ರೈತರ ಪರ. ರಸಗೊಬ್ಬರ ಬೆಲೆಗೆ ಸಬ್ಸಿಡಿ ನೀಡ್ತಿದ್ದೇವೆ. ಅದು ಇವರಿಗೆ ನೆನಪಿಲ್ವಾ? ಎಂದು ಪ್ರಶ್ನಿಸಿದ ಸಿ.ಟಿ.ರವಿ, ರೈತರ ಹೆಸರಿನಲ್ಲಿ ಈಗ ನಡೆಯುತ್ತಿರುವ ಹೋರಾಟ ರಾಜಕೀಯ ಷಡ್ಯಂತ್ರ, ಪಟ್ಟಭದ್ರ ಹಿತಾಸಕ್ತಿಗಳ ಷಡ್ಯಂತ್ರ ಎಂದು ಹೇಳಿದರು.

ಸಾವಯುವ ಕೃಷಿಯನ್ನೇ ಬ್ರ‍ಾಂಡ್ ಮಾಡಿ ಮಾರಾಟ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ. ರೈತರ ಅಭಿವೃದ್ಧಿ ಮಾಡುತ್ತಿರುವ ಬಿಜೆಪಿ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ರೈತರ ಹೆಸರಲ್ಲಿ ದಲ್ಲಾಳಿ ಪರವಾಗಿ ಕೆಲವರು ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ ಇವತ್ತು ದಲ್ಲಾಳಿಗಳ ಪರ ಹೋರಾಟ ಮಾಡುತ್ತಿದ್ದಾರೆ. ರೈತರ ಹೆಸರಲ್ಲಿ ದಲ್ಲಾಳಿಗಳ ಪರ ಮಾಡುತ್ತಿರುವ ರಾಕ್ಷಸರು ಈ ಹೋರಾಟಗಾರರು ಎಂದು ಸಿ.ಟಿ. ರವಿ ಆಕ್ರೋಶ ಹೊರಹಾಕಿದ್ದಾರೆ.

RELATED TOPICS:
English summary :CT Ravi

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...