Thu,Apr25,2024
ಕನ್ನಡ / English

ಉರಿ ಎಲ್ಓಸಿ ಬಳಿ ಕಾರ್ಯಾಚರಣೆಯಲ್ಲಿ 1 ಉಗ್ರ ತಟಸ್ಥ, 1 ಉಗ್ರ ತಟಸ್ಥ | ಜನತಾ ನ್ಯೂಸ್

28 Sep 2021
3516

ಉರಿ : ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕನನ್ನು ತಟಸ್ಥಗೊಳಿಸಲಾಗಿದ್ದು, ಇನ್ನೊಬ್ಬನ್ನನ್ನು ಬಂಧಿಸಲಾಗಿದೆ. ಇಲ್ಲಿಯವರೆಗೆ, 7 ಎ.ಕೆ. ಸರಣಿಯ ಶಸ್ತ್ರಾಸ್ತ್ರಗಳು, 9 ಪಿಸ್ತೂಲ್‌ಗಳು ಮತ್ತು ರಿವಾಲ್ವರ್‌ಗಳು ಮತ್ತು 80 ಕ್ಕೂ ಹೆಚ್ಚು ಗ್ರೆನೇಡ್‌ಗಳು ಮತ್ತು ಭಾರತೀಯ ಮತ್ತು ಪಾಕ್ ಕರೆನ್ಸಿಗಳು ಉರಿ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕನನ್ನು ತಟಸ್ಥಗೊಳಿಸಲಾಗಿದ್ದು, ಇನ್ನೊಬ್ಬ ಭಯೋತ್ಪಾದಕನನ್ನು ಸೆರೆಹಿಡಿಯಲಾಗಿದೆ, ಎಂದು ಮೇಜರ್ ಜನರಲ್ ವೀರೇಂದ್ರ ವಾಟ್ಸ್ ಅವರು ಎಏನ್ಐಗೆ ತಿಳಿಸಿದ್ದಾರೆ.

ಕಳೆದ 9 ದಿನಗಳ ಕಾಲದಿಂದ ಉರಿ ವಲಯದಲ್ಲಿ ಎಲ್‌ಒಸಿ ಉದ್ದಕ್ಕೂ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದಕ್ಕೂ ಮೊದಲು, ಎಲ್‌ಒಸಿಯಲ್ಲಿ ಭಾರತೀಯ ಗಸ್ತು ಪಡೆ ಒಳನುಸುಳುವಿಕೆಯ ಚಲನೆಯನ್ನು ಪತ್ತೆಹಚ್ಚಿದ ಬೆನ್ನಲ್ಲೇ ಸೆಪ್ಟೆಂಬರ್ 18ರಿಂದ ಉರಿ ವಲಯದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಎನ್ಕೌಂಟರ್ ನಡೆದಾಗ, 2 ಒಳನುಸುಳುಗಾರರು ಗಡಿಯೊಳಗೆ ಪ್ರವೇಶಿಸಿದ್ದರು ಹಾಗೂ ಇನ್ನೂ 4 ಉಗ್ರರು ಪಾಕಿಸ್ತಾನದ ಕಡೆ ಇದ್ದರು.

ಗುಂಡಿನ ಚಕಮಕಿಯ ನಂತರ, ಪಾಕ್ ಕಡೆಯ 4 ಭಯೋತ್ಪಾದಕರು ದಟ್ಟವಾದ ಎಲೆಗಳ ಲಾಭ ಪಡೆದು ಪಾಕ್ ಕಡೆ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ. ಇನ್ನೂಳಿದ 2 ಭಯೋತ್ಪಾದಕರು ಭಾರತದ ಕಡೆಗೆ ನುಸುಳಿದ್ದರು. ಭಾರತಕ್ಕೆ ನುಸುಳಿರುವ 2 ಭಯೋತ್ಪಾದಕರನ್ನು ಸುತ್ತುವರಿಯಲು ಹೆಚ್ಚುವರಿ ಪಡೆಗಳನ್ನು ಸಜ್ಜುಗೊಳಿಸಲಾಗಿದೆ.

ಸೆಪ್ಟೆಂಬರ್ 25 ರಂದು, ಒಂದು ಎನ್ಕೌಂಟರ್ ನಡೆಯಿತು, ಈ ಸಮಯದಲ್ಲಿ ಒಬ್ಬ ಭಯೋತ್ಪಾದಕನು ತಟಸ್ಥಗೊಂಡನು, ಇನ್ನೊಬ್ಬನನ್ನು ಸೆರೆ ಹಿಡಿಯಲಾಯಿತು. ಬಂಧನದಲ್ಲಿದ್ದ ಶರಣಾದ ಭಯೋತ್ಪಾದಕ ತನ್ನನ್ನು ಪಾಕ್ ನ ಪಂಜಾಬ್ ಪ್ರಾಂತ್ಯದ ಅಲಿ ಬಾಬರ್ ಪತ್ರ ಎಂದು ಗುರುತಿಸಿಕೊಂಡಿದ್ದಾನೆ. ಅವರು ಎಲ್‌ಇಟಿ ಸದಸ್ಯ ಎಂದು ಒಪ್ಪಿಕೊಂಡಿದ್ದಾರೆ ಮತ್ತು ಮುಜಾಫರಾಬಾದ್‌ನಲ್ಲಿ ಅವರಿಂದ ತರಬೇತಿ ಪಡೆದಿರುವುದಾಗಿ ಹೇಳಿಕೆ ನೀಡಿದ್ದಾನೆ.

ಈ ಒಳನುಸುಳುವಿಕೆ ಪ್ರಯತ್ನವನ್ನು ಸಲಾಮಾಬಾದ್ ನಾಲಾ ಪ್ರದೇಶದಲ್ಲಿ ಮಾಡಲಾಗಿದ್ದು, 2016ರಲ್ಲಿ ಅದೇ ಪ್ರದೇಶದಲ್ಲಿ ನಾವು ಒಳನುಸುಳುವಿಕೆಯ ಇತಿಹಾಸವನ್ನು ಕಂಡಿದ್ದೇವೆ. ಈ ಒಳನುಸುಳುವಿಕೆ ಗುಂಪನ್ನು ಪಾಕ್ ಕಡೆಯಿಂದ 3 ಪೋರ್ಟರ್‌ಗಳು ಬೆಂಬಲದೊಂದಿಗೆ ಎಲ್ಒಸಿ ವರೆಗೆ ಬಂದಿದ್ದರು.

ಇನ್ನೊಂದು ಬದಿಯಲ್ಲಿ ನಿಯೋಜಿಸಲಾಗಿರುವ ಪಾಕ್ ಸೇನೆಯ ಸಹಭಾಗಿತ್ವವಿಲ್ಲದೆ ಇಷ್ಟು ದೊಡ್ಡ ಗುಂಪಿನ ಜನರ ಚಲನೆ ನಡೆಯಲು ಸಾಧ್ಯವಿಲ್ಲ. ಎಲ್‌ಒಸಿಯಾದ್ಯಂತ ಲಾಂಚ್ ಪ್ಯಾಡ್‌ಗಳಲ್ಲಿ ಚಲನೆಗಳು ಕಂಡುಬಂದಿವೆ. ಕಳೆದ 7 ದಿನಗಳಲ್ಲಿ 7 ಭಯೋತ್ಪಾದಕರನ್ನು ತಟಸ್ಥಗೊಳಿಸಲಾಗಿದೆ, 1 ಭಯೋತ್ಪಾದಕರನ್ನು ಬಂಧಿಸಲಾಗಿದೆ, ಎಂದು ಮೇಜರ್ ಹೇಳಿದ್ದಾರೆ.

RELATED TOPICS:
English summary :1 terrorist arrested, 1 neutralised Operation in Uri near LoC

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...