ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವಕನಿಗೆ ಬೆಂಕಿ, ಸಾವು! | ಜನತಾ ನ್ಯೂಸ್
ಮಂಡ್ಯ : ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕನೊಬ್ಬ ದಾಯಾದಿ ಕಲಹದಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಮೂಡನಹಳ್ಳಿ ರಘು (29) ಮೃತ ದುರ್ದೈವಿ. ಒಂದೂವರೆ ತಿಂಗಳ ಹಿಂದೆಯಷ್ಟೇ ರಘು ಮದುವೆಯಾಗಿದ್ದು, ಸ್ವಂತ ಕಾರು ಹೊಂದಿದ್ದ ರಘು ಬೆಂಗಳೂರಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.
ಸೆ.26ರಂದು ಬೆಂಗಳೂರಿಗೆ ಹೊರಡಲು ನಿರ್ಧರಿಸಿದ್ದ ರಘು, 25ರ ರಾತ್ರಿ ಕಾರನ್ನು ಸ್ವಚ್ಛ ಮಾಡುತ್ತಿದ್ದ. ಈ ವೇಳೆ ಹಿಂದಿನಿಂದ ದುಷ್ಕರ್ಮಿಯೊಬ್ಬ ರಘು ಮೇಲೆ ಪೆಟ್ರೋಲ್ ಸುರಿದು ಬೆಂಕಿ ಪರಾರಿಯಾಗಿದ್ದ. ಈ ಕೃತ್ಯ ಮಾಡಿದ್ದು, ರಘು ದಾಯಾದಿ ಶಿವು ಎಂದು ಹೇಳಲಾಗುತ್ತಿದೆ. ಘಟನೆ ನಂತರ ಶಿವು ಇದೀಗ ತಲೆ ಮರೆಸಿಕೊಂಡಿದ್ದಾನೆ.
ಸುಟ್ಟಗಾಯಗಳಿಂದ ನರಳುತ್ತಿದ್ದ ರಘುನನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ರಘು ಮೃತಪಟ್ಟಿದ್ದಾನೆ.
ಈ ಪ್ರಕರಣ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದ್ದು, ಶಿವು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.