ಜಿ-23 ನಾಯಕರ ಬೇಡಿಕೆ : ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ(ಸಿಡಬ್ಲ್ಯೂಸಿ) ಸಭೆಯನ್ನು ಶೀಘ್ರದಲ್ಲೇ - ರಣದೀಪ್ ಸುರ್ಜೇವಾಲಾ | ಜನತಾ ನ್ಯೂಸ್
ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನ ಹಾಗೂ ಜಿ-23 ನಾಯಕರ ಬೇಡಿಕೆಯ ಬೆನ್ನಲ್ಲೇ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ(ಸಿಡಬ್ಲ್ಯೂಸಿ) ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುವುದು, ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ರಾಷ್ಟೀಯ ಅಧ್ಯಕ್ಷ ಸ್ಥಾನವೂ ಸೇರಿದಂತೆ ಪಕ್ಷದಲ್ಲಿ ಸಾಂಸ್ಥಿಕ ಚುನಾವಣೆಗೆ ಜಿ-23 ನಾಯಕರು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಮಾತನಾಡಿದ ಕಪಿಲ್ ಸಿಬಲ್ ಅವರ ಮನೆ ಮುಂದೆ ಕೆಲವು ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವಿರುದ್ಧ ಪಕ್ಷದೊಳಗೆ ಸಾಕಷ್ಟು ಖಂಡನೆ ವ್ಯಕ್ತವಾಗಿದೆ.
RELATED TOPICS:
English summary :G-23 leader demand : Congress Working Committee (CWC) will be called soon - Randeep Surjewala