ಅಕ್ಟೋಬರ್ ನಲ್ಲೇ ಮಕ್ಕಳಿಗೆ ಲಸಿಕೆ ವಿತರಣೆ ಸಾಧ್ಯತೆ: ಡಾ ಸುಧಾಕರ್ | ಜನತಾ ನ್ಯೂಸ್
ಬೆಂಗಳೂರು : ಮೂರನೇ ಹಂತದ ವ್ಯಾಕ್ಸಿನೇಷನ್ ಆರಂಭವಾಗಲಿದೆ. ಅಕ್ಟೋಬರ್ ತಿಂಗಳಲ್ಲಿ ಮಕ್ಕಳಿಗೂ ಲಸಿಕೆ ಬರಲಿದೆ. ಕೇಂದ್ರ ದರ ನಿಗದಿಪಡಿಸಲಿದೆ. ದರ ನಿಗದಿ ಬಳಿಕ ಅಂತಿಮವಾಗಿ ತೀರ್ಮಾನವಾಗಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.
ಕೊವಿಡ್ ತಡೆ ಮಾರ್ಗಸೂಚಿ ಅನ್ವಯ ಈಗಾಗಲೇ ಶಾಲೆ ಆರಂಭವಾಗಿದೆ. ಮಕ್ಕಳಿಗೆ ಲಸಿಕೆ ಕೊಡುವ ಬಗ್ಗೆ ಕೇಂದ್ರ ಸರ್ಕಾರ ಯಾವಾಗ ಬೇಕಾದರೂ ಘೋಷಣೆ ಮಾಡಬಹುದು. ಮಕ್ಕಳಲ್ಲಿ ಶೇಕಡಾ .008 ರಷ್ಟು ಮಾತ್ರ ಸೋಂಕು ಕಂಡುಬಂದಿದೆ.ಶೇ.10ರಷ್ಟು ಮಕ್ಕಳಿಗೆ ಟೆಸ್ಟ್ ಮಾಡುವಂತೆ ಸೂಚಿಸಿದ್ದೇವೆ.
ಶಾಲೆಗಳಲ್ಲಿ ಹೋದಾಗ, ಬೇರೆ ಸಂದರ್ಭದಲ್ಲಿ ಎಚ್ಚರ ಅಗತ್ಯ. ಕೊವಿಡ್ ಸೋಂಕು ಹೆಚ್ಚದಿರುವಂತೆ ತಡೆಯಲು ಬೇರೆ ಬೇರೆ ಇಲಾಖೆಗಳ ಮುಖಾಂತರ ಮಾರ್ಗಸೂಚಿ ಹೊರಡಿಸಬೇಕಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದರು.
ಸಿನಿಮಾ ಮಂದಿರಗಳಿಗೆ 100ರಷ್ಟು ಅವಕಾಶ ನೀಡಲಾಗಿದೆ. ಅದನ್ನು ಹೊರತುಪಡಿಸಿದರೆ ಕೆಲವು ನಿರ್ಬಂಧ ಮಾತ್ರ ಇದೆ. ಎರಡು ಡೋಸ್ ಸಂಪೂರ್ಣವಾಗಿ ಕೊಡುವವರೆಗೂ ಯಾವುದೇ ರೀತಿಯ ಸಮಾರಂಭ ಮಾಡಲು ಅವಕಾಶ ಇಲ್ಲ. ಈಜುಕೊಳಕ್ಕೂ ಕೂಡ ಸದ್ಯ ಅನುಮತಿ ಕೊಡುವುದಿಲ್ಲ ಎಂದು ಸಚಿವರು ಹೇಳಿದರು.