ಹಾಸ್ಟೆಲ್ನ ಬಾತ್ರೂಮಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ! | ಜನತಾ ನ್ಯೂಸ್
ಮಂಗಳೂರು : ನಗರದ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಕೇರಳದ ಕಾಸರಗೋಡಿನ ತೂಂಬುಂಗಲ್ ಅರಿಂಬಾ ಕಡುಮೇನಿ ನಿವಾಸಿ ನೀನಾ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳೂರಿನ ಡಾ. ಲ್ಯಾಡೋ ಕೊಲಾಸೋ ಕಾಲೇಜಿನ ನೀನಾ ಸತೀಶ್ ಆತ್ಮಹತ್ಯೆ ಮಾಡಿಕೊಂಡ ಪ್ರಥಮ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದಾಳೆ. ಕಾಲೇಜು ಹಾಸ್ಟೆಲ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕೇರಳದ ಕಾಸರಗೋಡು ನಿವಾಸಿ ನೀನಾ ಸತೀಶ್, ಮಂಗಳೂರಿನ ಡಾ. ಲ್ಯಾಡೋ ಕೊಲಾಸೋ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ನರ್ಸಿಂಗ್ ಕೋರ್ಸ್ಗೆ ದಾಖಲಾಗಿದ್ದರು. ಕೊಲಾಸೋ ಕಾಲೇಜಿನ ಹಾಸ್ಟೆಲ್ನಲ್ಲಿ ನೀನಾ ಸತೀಶ್ ವಾಸ್ತವ್ಯ ಮಾಡುತ್ತಿದ್ದರು. ಆದರೆ ಮಂಗಳವಾರ ಬೆಳಗ್ಗೆ ನೀನಾ ಸತೀಶ್ ಹಾಸ್ಟೆಲ್ನ ಬಾತ್ ರೂಂನಲ್ಲಿ ನೇಣಿಗೆ ಶರಣಾಗಿದ್ದಾಳೆ.
ಇದನ್ನು ನೋಡಿದ ವಿದ್ಯಾರ್ಥಿನಿಯೂ ಆಘಾತದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ವಿಷಯ ತಿಳಿದ ಸಿಬ್ಬಂದಿ ಕೂಡಲೇ ಆಕೆಯನ್ನು ನೇಣು ಕುಣಿಕೆಯಿಂದ ಹೊರಕ್ಕೆ ತೆಗೆದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನೀನಾ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಕಾಲೇಜಿನ ಫೀಸ್ ಕಟ್ಟಬೇಕೆಂಬ ಒತ್ತಡ ಇತ್ತು ಎಂಬ ಆರೋಪಗಳು ಕೇಳಿ ಬಂದಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.