ಮಕ್ಕಳು ಪಡೆಯೋಕೆ ಹಂಬಲಿಸುವ ಶ್ರೀಮಂತ ದಂಪತಿಗಳೇ ಟಾರ್ಗೆಟ್! | ಜನತಾ ನ್ಯೂಸ್
ಬೆಂಗಳೂರು : ಮಕ್ಕಳು ಪಡೆಯೋಕೆ ಹಂಬಲಿಸುವ ದಂಪತಿಗಳನ್ನೇ ಟಾರ್ಗೆಟ್ ಮಾಡಿಕೊಂಡಿರುವ ದುಷ್ಕರ್ಮಿಗಳ ಗುಂಪನ್ನು ಪೊಲೀಸರು ಬಂಧಿಸಿದ್ದಾರೆ.
ಮಕ್ಕಳಾಗದ ದಂಪತಿಗೆ ಬಾಡಿಗೆ ತಾಯಿ ಮೂಲಕ ಮಕ್ಕಳನ್ನು ಕೊಡಿಸುತ್ತೇವೆ ಎಂದು ಹೇಳಿ ಲಕ್ಷಾಂತರ ರೂ ಹಣ ಪಡೆದು ವಂಚಿಸುತ್ತಿದ್ದ ಇವರನ್ನು ಬೆಂಗಳೂರು ಪೊಲೀಸರು ದೊಡ್ಡ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ದೇವಿ ಷಣ್ಮುಗಮ್ಮ, ಮಹೇಶ್, ರಾಜಣ್ಣ, ಜನಾರ್ಧನ್, ಧನಲಕ್ಷ್ಮೀ ಬಂಧಿತ ಆರೋಪಿಗಳು. ಆರೋಪಿಗಳು ಬಡಕುಟಂಬದ ಮಕ್ಕಳನ್ನು ಕಡಿಮೆ ಹಣಕ್ಕೆ ಖರೀದಿಸುತ್ತಿದ್ದರು. ಬಳಿಕ ಮಕ್ಕಳಿಲ್ಲದವರಿಗೆ ಬಾಡಿಗೆ ತಾಯಿ ಮೂಲಕ ಮಗುವಾಗಿದೆ ಎಂದು ನಂಬಿಸಿ, ಲಕ್ಷಗಟ್ಟಲೇ ಹಣ ಪಡೆದು ವಂಚಿಸುತ್ತಿದ್ದರು.
13 ಮಕ್ಕಳನ್ನು ರಕ್ಷಿಸಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಾಡಿಗೆ ಹಣ ಪಡೆದು ಮಗು ಮಾರಾಟ ಮಾಡುತ್ತಿದ್ದ ವೇಳೆ ನಡೆದ ದಾಳಿಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬಡಮಕ್ಕಳಿಗೆ ಹೆಣ್ಣು ಮಗುವಿಗೆ 80 ಸಾವಿರ ಕೊಟ್ರೆ, ಗಂಡು ಮಗುವಿಗೆ 1.5 ಲಕ್ಷ ರೂ. ಫಿಕ್ಸ್ ಮಾಡುತ್ತಿದ್ದರು. ಹೀಗೆ ಮಕ್ಕಳನ್ನು ಕೊಂಡು 1.5 ಲಕ್ಷದಿಂದ 6 ಲಕ್ಷ ರೂ.ವರೆಗೂ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.