ಬಿಎಸ್ ವೈ ಆಪ್ತನ ನಿವಾಸದ ಮೇಲೆ ಐಟಿ ದಾಳಿ, ಇದರಿಂದ ಪಕ್ಷದಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ! | ಜನತಾ ನ್ಯೂಸ್
ಕಲಬುರಗಿ : ಬಿಎಸ್ ವೈ ಆಪ್ತನ ನಿವಾಸದ ಮೇಲೆ ಐಟಿ ದಾಳಿ, ಇದರಿಂದ ಪಕ್ಷದಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದರು.
ರಾಜ್ಯದಲ್ಲಿ ತುಂಬಾ ದಿನಗಳ ನಂತರ ಮತ್ತು ಉಪ ಚುನಾವಣೆ ಸಂದರ್ಭದಲ್ಲಿ ಐಟಿ ದಾಳಿ ನಡೆದಿದ್ದು ಹಾಗೂ ಬಿಎಸ್ ವೈ ಆಪ್ತರ ನಿವಾಸದ ಮೇಲೆ ಈ ದಾಳಿ ಮಾಡಿದ್ದು ಬಿಜೆಪಿಯ ಆಂತರಿಕ ವಿಷಯ ಇರಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂದರು.
ಮಾಜಿ ಸಿಎಂ ಬಿಎಸ್ವೈ ಹಾಗೂ ಡಿಕೆಶಿ ಆಪ್ತರ ಮೇಲೆ ಐಟಿ ದಾಳಿ ಸಂಬಂಧಿಸಿದಂತೆ ಕಲಬುರಗಿ ಏರ್ಪೋರ್ಟ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಐಟಿ ದಾಳಿ ಬಗ್ಗೆ ನನಗೆ ಯಾವುದೇ ರೀತಿಯ ಪ್ರತಿಕ್ರಿಯೆ ಇಲ್ಲ. ಆದರೆ ಉಪಚುನಾಣೆ ಸಂದರ್ಭದಲ್ಲಿ ಐಟಿ ದಾಳಿ ಸರ್ವೇ ಸಾಮಾನ್ಯ. ಆದರೆ ಬಿಎಸ್ವೈ ಆಪ್ತರ ಮೇಲೆ ದಾಳಿ ನಡೆದಿರುವುದು ಕುತೂಹಲ ಮೂಡಿಸಿದೆ. ಇದರಿಂದ ಅವರ ಪಕ್ಷದಲ್ಲಿ ಆಂತರಿಕ ಕಚ್ಚಾಟ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ದೂರಿದರು.
ಸಿಂದಗಿಯಲ್ಲಿ ಅಲ್ಪಸಂಖ್ಯಾತರ ಅಭ್ಯರ್ಥಿ ಹಾಕಿರುವ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆ. ನಮ್ಮ ಪಕ್ಷದ ಮಾತನಾಡಲು ಸಿದ್ದರಾಮಯ್ಯ ಯಾರು? ನಮ್ಮ ಬಗ್ಗೆ ಮಾತನಾಡಲು ಇವರು ಯಾವ ದೊಣ್ಣೆ ನಾಯಕ ಎಂದು ಕಿಡಿಕಾರಿದರು.
ಜಾತ್ಯತೀತ ಶಕ್ತಿಗಳನ್ನು ಒಗ್ಗೂಡಿಸಲು ಮತ್ತು ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಏನು ಕೊಡುಗೆ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಅಲ್ಪಸಂಖ್ಯಾತರೇ ಸಿದ್ದರಾಮಯ್ಯ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ನಾನು ಎಚ್ಚರಿಸಲು ಬಯಸುತ್ತೇನೆ ಎಂದರು.