Fri,Apr26,2024
ಕನ್ನಡ / English

ಮೋಜು ಮಸ್ತಿಗಾಗಿ ಪ್ರೇಮಿಗಳಿಬ್ಬರು ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆಗಳ್ಳತನ! | ಜನತಾ ನ್ಯೂಸ್

08 Oct 2021
3216

ಬೆಂಗಳೂರು : ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆ ಕಳ್ಳತನ ಮಾಡಿ ಮೋಜು ಮಸ್ತಿ ಮಾಡುತ್ತಿದ್ದ ಇಬ್ಬರು ಪ್ರೇಮಿಗಳನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಪ್ರೇಮಿಗಳನ್ನು ವಿನಯ್ (32) ಹಾಗೂ ಪ್ರೇಯಸಿ ಕೀರ್ತನಾ(25) ಎಂದು ಗುರುತಿಸಲಾಗಿದೆ. ಕೊಲೆ ಯತ್ನ, ಹಲ್ಲೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ರೌಡಿಶೀಟರ್ ಆಗಿದ್ದ ವಿನಯ್ ಬಾಗಲಗುಂಟೆಯಲ್ಲಿ ವಾಸ ಮಾಡುತ್ತಿದ್ದ. ಕಳೆದ ಮೂರು ವರ್ಷಗಳಿಂದ ಕೀರ್ತನಾ ಹಾಗು ವಿನಯ್ ಪ್ರೇಮಿಗಳಾಗಿದ್ದಾರೆ.

ಇವರಿಬ್ಬರೂ ಮೋಜು - ಮಸ್ತಿ ಮಾಡಬೇಕೆಂಬ ತುಡಿತ ಹೊಂದಿದ್ದರು. ಆದರೆ, ಕೈಯಲ್ಲಿ ಹಣವಿರಲಿಲ್ಲ. ಮತ್ತೊಂದೆಡೆ ಲಾಂಗ್ ಡ್ರೈವ್​​​​ಗೆ ಕರೆದುಕೊಂಡು ಹೋಗಿ ಉಡುಗೊರೆ ಕೊಡಿಸುವಂತೆ ಕೀರ್ತನಾ ಪೀಡಿಸುತ್ತಿದ್ದಳಂತೆ. ಹೀಗಾಗಿ ವಿನಯ್ ತನ್ನ ಜೊತೆ ಕಳ್ಳತನಕ್ಕೆ ಪ್ರಿಯತಮೆ ಕೀರ್ತನಾಳು ಸಾಥ್ ನೀಡುತಿದ್ದಳು.

ಹೀಗಾಗಿ, ವಿನಯ್​ ಹಾಗು ಪ್ರೇಯಸಿ ಕೀರ್ತನಾ ಬೈಕ್​ನಲ್ಲಿ ಏರಿಯಾ ರೌಂಡ್ಸ್ ಹಾಕಿ ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆಗಳ್ಳತನ ಮಾಡುತ್ತಿದ್ದರು. ಮನೆ ಖಾಲಿ ಇದೆ ಎಂಬ ಫಲಕವೇ ಇವರ ಬಂಡವಾಳವಾಗಿತ್ತು. ಮನೆಯ ಬಗ್ಗೆ ವಿಚಾರಿಸಲು ಮಾಲೀಕರ ಮನೆಗೆ ತೆರಳಿ ಅವರ ಕಣ್ತಪ್ಪಿಸಿ ಖತರ್ನಾಕ್​ ಪ್ರೇಮಿಗಳು ಕಳ್ಳತನ ಮಾಡುತ್ತಿದ್ದರು.

ಕಳೆದ ಅ.4 ರಂದು ಮಾರುತಿನಗರದ ಕುಲಶೇಖರ್ ಎನ್ನುವವರ ಮನೆಗೆ ವಿನಯ್ ಹಾಗೂ ಕೀರ್ತನಾ ಬಾಡಿಗೆ ಮನೆ ಕೇಳುವ ನೆಪದಲ್ಲಿ ತೆರಳಿದ್ದರು. ನಾವಿಬ್ಬರು ದಂಪತಿ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಮನೆ ಮಾಲೀಕರ ಜೊತೆ ವಿನಯ್ ಮಾತಿಗಿಳಿದಿದ್ದ.

ವಿನಯ್, ಕುಲಶೇಖರ್ ಜೊತೆ ಮಾತಾಡುತ್ತಿದ್ದರೆ ಇತ್ತ ಕೀರ್ತನಾ ಮಾಲೀಕರ ಮನೆಯಲ್ಲಿದ್ದ 1 ಮೊಬೈಲ್, 1 ಲ್ಯಾಪ್​ಟಾಪ್​ ಹಾಗೂ 15 ಸಾವಿರ ಹಣ ಕಳ್ಳತನ ಮಾಡಿ ಪರಾರಿಯಾಗಿದ್ದರು.‌ನಂತರ ಮನೆ ಮಾಲೀಕರು ಲ್ಯಾಪ್​ಟಾಪ್​ ಕಾಣಿಸದಿರುವುದನ್ನು ಕಂಡು ಅನುಮಾನಗೊಂಡಿದ್ದಾರೆ.

ನಂತರ ಮನೆಯ ಕೋಣೆಗೆ ಅಳವಡಿಸಿದ್ದ ಸಿಸಿಟಿವಿಯನ್ನು ಪರಿಶೀಲಿಸಿದ್ದಾರೆ. ಆಗ ಮನೆ ಬಾಡಿಗೆಗೆ ಬಂದವರು ಎಸಗಿದ ಕೃತ್ಯ ಬಯಲಿಗೆ ಬಂದಿದೆ. ಈ ಸಂಬಂಧ ಮನೆ ಮಾಲೀಕ ಕುಲಶೇಖರ್ ಕೊಟ್ಟ ದೂರಿನನ್ವಯ ಸದ್ಯ ಇಬ್ಬರು ಆರೋಪಿಗಳನ್ನು​ ಚಂದ್ರ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...