Sun,May19,2024
ಕನ್ನಡ / English

ಮೋಜು ಮಸ್ತಿಗಾಗಿ ಪ್ರೇಮಿಗಳಿಬ್ಬರು ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆಗಳ್ಳತನ! | ಜನತಾ ನ್ಯೂಸ್

08 Oct 2021
3220

ಬೆಂಗಳೂರು : ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆ ಕಳ್ಳತನ ಮಾಡಿ ಮೋಜು ಮಸ್ತಿ ಮಾಡುತ್ತಿದ್ದ ಇಬ್ಬರು ಪ್ರೇಮಿಗಳನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಪ್ರೇಮಿಗಳನ್ನು ವಿನಯ್ (32) ಹಾಗೂ ಪ್ರೇಯಸಿ ಕೀರ್ತನಾ(25) ಎಂದು ಗುರುತಿಸಲಾಗಿದೆ. ಕೊಲೆ ಯತ್ನ, ಹಲ್ಲೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ರೌಡಿಶೀಟರ್ ಆಗಿದ್ದ ವಿನಯ್ ಬಾಗಲಗುಂಟೆಯಲ್ಲಿ ವಾಸ ಮಾಡುತ್ತಿದ್ದ. ಕಳೆದ ಮೂರು ವರ್ಷಗಳಿಂದ ಕೀರ್ತನಾ ಹಾಗು ವಿನಯ್ ಪ್ರೇಮಿಗಳಾಗಿದ್ದಾರೆ.

ಇವರಿಬ್ಬರೂ ಮೋಜು - ಮಸ್ತಿ ಮಾಡಬೇಕೆಂಬ ತುಡಿತ ಹೊಂದಿದ್ದರು. ಆದರೆ, ಕೈಯಲ್ಲಿ ಹಣವಿರಲಿಲ್ಲ. ಮತ್ತೊಂದೆಡೆ ಲಾಂಗ್ ಡ್ರೈವ್​​​​ಗೆ ಕರೆದುಕೊಂಡು ಹೋಗಿ ಉಡುಗೊರೆ ಕೊಡಿಸುವಂತೆ ಕೀರ್ತನಾ ಪೀಡಿಸುತ್ತಿದ್ದಳಂತೆ. ಹೀಗಾಗಿ ವಿನಯ್ ತನ್ನ ಜೊತೆ ಕಳ್ಳತನಕ್ಕೆ ಪ್ರಿಯತಮೆ ಕೀರ್ತನಾಳು ಸಾಥ್ ನೀಡುತಿದ್ದಳು.

ಹೀಗಾಗಿ, ವಿನಯ್​ ಹಾಗು ಪ್ರೇಯಸಿ ಕೀರ್ತನಾ ಬೈಕ್​ನಲ್ಲಿ ಏರಿಯಾ ರೌಂಡ್ಸ್ ಹಾಕಿ ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆಗಳ್ಳತನ ಮಾಡುತ್ತಿದ್ದರು. ಮನೆ ಖಾಲಿ ಇದೆ ಎಂಬ ಫಲಕವೇ ಇವರ ಬಂಡವಾಳವಾಗಿತ್ತು. ಮನೆಯ ಬಗ್ಗೆ ವಿಚಾರಿಸಲು ಮಾಲೀಕರ ಮನೆಗೆ ತೆರಳಿ ಅವರ ಕಣ್ತಪ್ಪಿಸಿ ಖತರ್ನಾಕ್​ ಪ್ರೇಮಿಗಳು ಕಳ್ಳತನ ಮಾಡುತ್ತಿದ್ದರು.

ಕಳೆದ ಅ.4 ರಂದು ಮಾರುತಿನಗರದ ಕುಲಶೇಖರ್ ಎನ್ನುವವರ ಮನೆಗೆ ವಿನಯ್ ಹಾಗೂ ಕೀರ್ತನಾ ಬಾಡಿಗೆ ಮನೆ ಕೇಳುವ ನೆಪದಲ್ಲಿ ತೆರಳಿದ್ದರು. ನಾವಿಬ್ಬರು ದಂಪತಿ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಮನೆ ಮಾಲೀಕರ ಜೊತೆ ವಿನಯ್ ಮಾತಿಗಿಳಿದಿದ್ದ.

ವಿನಯ್, ಕುಲಶೇಖರ್ ಜೊತೆ ಮಾತಾಡುತ್ತಿದ್ದರೆ ಇತ್ತ ಕೀರ್ತನಾ ಮಾಲೀಕರ ಮನೆಯಲ್ಲಿದ್ದ 1 ಮೊಬೈಲ್, 1 ಲ್ಯಾಪ್​ಟಾಪ್​ ಹಾಗೂ 15 ಸಾವಿರ ಹಣ ಕಳ್ಳತನ ಮಾಡಿ ಪರಾರಿಯಾಗಿದ್ದರು.‌ನಂತರ ಮನೆ ಮಾಲೀಕರು ಲ್ಯಾಪ್​ಟಾಪ್​ ಕಾಣಿಸದಿರುವುದನ್ನು ಕಂಡು ಅನುಮಾನಗೊಂಡಿದ್ದಾರೆ.

ನಂತರ ಮನೆಯ ಕೋಣೆಗೆ ಅಳವಡಿಸಿದ್ದ ಸಿಸಿಟಿವಿಯನ್ನು ಪರಿಶೀಲಿಸಿದ್ದಾರೆ. ಆಗ ಮನೆ ಬಾಡಿಗೆಗೆ ಬಂದವರು ಎಸಗಿದ ಕೃತ್ಯ ಬಯಲಿಗೆ ಬಂದಿದೆ. ಈ ಸಂಬಂಧ ಮನೆ ಮಾಲೀಕ ಕುಲಶೇಖರ್ ಕೊಟ್ಟ ದೂರಿನನ್ವಯ ಸದ್ಯ ಇಬ್ಬರು ಆರೋಪಿಗಳನ್ನು​ ಚಂದ್ರ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...