ಲಾಕಪ್ ಚಿಲಕ ತೆಗೆದು ಪರಾರಿಯಾದ ಅತ್ಯಾಚಾರ ಆರೋಪಿ! | ಜನತಾ ನ್ಯೂಸ್
ಚಿಕ್ಕಮಗಳೂರು : ಅತ್ಯಾಚಾರ ಮಾಡಿ ಬಂಧನಕ್ಕೊಳಗಾಗಿದ್ದ ಆರೋಪಿಯೊಬ್ಬ ಪೊಲೀಸ್ ಠಾಣೆಯ ಲಾಕಪ್ ನ ಚಿಲಕ ತೆಗೆದು ಪರಾರಿಯಾಗಿರುವ ಘಟನೆ ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ.
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನದ ಆರೋಪದ ಮೇಲೆ ಯುವಕನನ್ನು ಬಂಧಿಸಿ, ಬಾಳೆಹೊನ್ನೂರು ಪೊಲೀಸ್ ಠಾಣೆಯ ಲಾಕಪ್ ನಲ್ಲಿರಿಸಲಾಗಿತ್ತು. ಪ್ರಕರಣ ಸಂಬಂಧ ಆರೋಪಿ ನಿಜಾಮ್ (26) ಬಂಧನಕ್ಕೀಡಾಗಿ, ಠಾಣೆಯ ಲಾಕಪ್ ನಲ್ಲಿದ್ದ.
ಠಾಣೆಯಲ್ಲಿ ಸಿಬ್ಬಂದಿಗಳು ಇಲ್ಲದ ಸಮಯ ನೋಡಿ ಆರೋಪಿ ಲಾಕಪ್ನ ಚಿಲಕವನ್ನು ತೆಗೆದು ಹೊರಬಂದು ಸಲೀಸಾಗಿ ಎಸ್ಕೇಪ್ ಆಗಿದ್ದಾನೆ.
RELATED TOPICS:
English summary :Chikkamagaluru