ಆರ್ಎಸ್ಎಸ್ ಮತ್ತು ಬಿಜೆಪಿಯನ್ನ ಟೀಕಿಸದಿದ್ದರೆ ಎಚ್.ಡಿ.ಕುಮಾರಸ್ವಾಮಿಗೆ ನಿದ್ದೆ ಬರಲ್ಲ: ರೇಣುಕಾಚಾರ್ಯ ಟಾಂಗ್ | ಜನತಾ ನ್ಯೂಸ್
ಬೆಂಗಳೂರು : ಆರ್ಎಸ್ಎಸ್ ಮತ್ತು ಬಿಜೆಪಿಯನ್ನ ಟೀಕಿಸದಿದ್ದರೆ ಎಚ್.ಡಿ.ಕುಮಾರಸ್ವಾಮಿಗೆ ನಿದ್ದೆ ಬರಲ್ಲ. ಎರಡು ಬಾರಿ ಮುಖ್ಯಮಂತ್ರಿಯಾದರೂ ಅವಧಿ ಪೂರ್ಣಗೊಳಿಸಲಿಲ್ಲ ಎಂಬ ಹತಾಶೆಯಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡುತ್ತಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು.
ಯಡಿಯೂರಪ್ಪ ಅವರ ಆಪ್ತರ ಮನೆಗಳ ಮೇಲೆ ಐಟಿ ದಾಳಿ ಆಗಿದೆ ಎಂದು ಹೇಳುವುದು ಸರಿಯಲ್ಲ. ಐಟಿ ಅಧಿಕಾರಿಗಳು ಅವರ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿಲ್ಲ. ಅವರ ರಾಜ್ಯ ಪ್ರವಾಸಕ್ಕೆ ಕಡಿವಾಣ ಹಾಕಿಲ್ಲ. ಯಡಿಯೂರಪ್ಪ ಅವರೇ ಬಿಜೆಪಿ ತಂಡದಲ್ಲಿ ಕೆಲಸ ಮಾಡಿ ಮತ್ತೆ ಅಧಿಕಾರ ತರುವ ಸಂಕಲ್ಪ ಮಾಡಿದ್ದಾರೆ. ತಮಗೆ ಆದಾಯ ತೆರಿಗೆ ದಾಳಿ ಭಯವಿಲ್ಲ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದರು.
ಯಡಿಯೂರಪ್ಪ ಅವರನ್ನು ಬಿಜೆಪಿ ಸೈಡ್ ಲೈನ್ ಮಾಡಿಲ್ಲ. ಅವರ ಬಗ್ಗೆ ಎಲ್ಲರಿಗೂ ಗೌರವ ಇದೆ. ಐಟಿ ದಾಳಿ ಯಾಕೆ ಆಯ್ತು ಎಂದು ಚರ್ಚೆ ಮಾಡಲು ಇಷ್ಟ ಪಡಲ್ಲ ಎಂದರು. ಯಡಿಯೂರಪ್ಪ ಆಪ್ತರಾಗಿರುವ ನಿಮಗೆ ಐಟಿ ದಾಳಿ ಭಯ ಇದ್ಯಾ? ಎಂಬ ಪ್ರಶ್ನೆಗೆ ನನಗೆ ಯಾವುದೇ ಭಯ ಇಲ್ಲ ಎಂದು ತಿಳಿಸಿದರು.
ಆರ್ಎಸ್ಎಸ್ ಮತ್ತು ಬಿಜೆಪಿಯನ್ನ ಟೀಕಿಸದಿದ್ದರೆ ಎಚ್.ಡಿ.ಕುಮಾರಸ್ವಾಮಿಗೆ ನಿದ್ದೆ ಬರಲ್ಲ. ಎರಡು ಬಾರಿ ಲಾಟರಿ ಹೊಡೆದು ಮುಖ್ಯಮಂತ್ರಿಯಾದವರು. ಅಧಿಕಾರ ಹೋದ ಹತಾಶೆಯಿಂದ ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು.