Fri,Apr26,2024
ಕನ್ನಡ / English

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂಸ್

14 Oct 2021
3889

ಬೆಂಗಳೂರು : ಹರ್ಬಲ್ ಲೈಫ್ ಮೆಡಿಸಿನ್ ಕೊಡುವ ನೆಪದಲ್ಲಿ ಹನಿಟ್ರ್ಯಾಪ್ ಮಾಡಿ ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಆರೋಪದ ಮೇಲೆ ಈಕೆಯನ್ನು ಬಂಧಿಸಲಾಗಿದೆ.

ನಗರದಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಮಹಿಳೆಯೊಬ್ಬಳಿಂದ ವಂಚನೆಗೊಳ್ಳಗಾದ ಕಂಟ್ರಾಕ್ಟರ್​ ಒಬ್ಬರು ಈ ಸಂಬಂಧ ದೂರು ನೀಡಿದ್ದರು. ಈ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತೆಯನ್ನು ವಿದ್ಯಾ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಸಿವಿಲ್ ಕಾಂಟ್ರಾಕ್ಟರ್ ಲೋಹಿತ್ ಎಂಬುವವರು ಈಕೆ ವಿರುದ್ಧ ದೂರು ನೀಡಿದ್ದರು. ಫೋಟೋಗಳನ್ನು ತೋರಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಆರೋಪದ ಮೇಲೆ ಈಕೆಯನ್ನು ಬಂಧಿಸಲಾಗಿದೆ.

ಘಟನೆ :
ಹರ್ಬಲ್ ಲೈಫ್ ಪ್ರಾಡಕ್ಟ್ ಹೆಸರಿನಲ್ಲಿ ಸಿವಿಲ್​ ಕಂಟ್ರಾಕ್ಟರ್ ಲೋಹಿತ್​ ಅವರನ್ನು ಇಬ್ಬರು ಹುಡುಗರು ಭೇಟಿಯಾಗಿದ್ದರು. ಈ ವೇಳೆ ತಮ್ಮ ಉತ್ಪನ್ನದ ಕುರಿತು ತಿಳಿಸಿದ ಅವರು ಈ ಪ್ರೋಡಕ್ಟ್​ ಬೇಕಿದ್ದರೆ, ಈ ನಂಬರ್​ಗೆ ಕರೆ ಮಾಡಿ ಎಂದು ವಿದ್ಯಾ ನಂಬರ್​ ಕೊಟ್ಟಿದ್ದರು. ಈ ವೇಳೆ ಕರೆ ಮಾಡಿದಾಗ, ಆರೋಪಿತೆ ವಿದ್ಯಾ ಜೊತೆ ಹರ್ಬಲ್ ಲೈಫ್ ಪ್ರೊಡಕ್ಟ್ ಖರೀದಿ ವಿಚಾರವಾಗಿ ಲೋಹಿತ್​ಗೆ ಸ್ನೇಹ ಬೆಳೆದಿದೆ. ಇದಾದ ಬಳಿಕ ಇಬ್ಬರ ನಡುವಿನ ಸಂಭಾಷಣೆ ಸ್ನೇಹಕ್ಕೆ ತಿರುಗಿದೆ.

ಇಬ್ಬರ ನಡುವಿನ ಪರಿಚಯ ರೆಸಾರ್ಟ್‌ಗೆ ಹೋಗಿ ಏಕಾಂತದಲ್ಲಿ ಕಳೆಯುವ ಹಂತಕ್ಕೆ ತಲುಪಿತ್ತು. ಇಬ್ಬರೂ ಒಮ್ಮೆ ಕನಕಪುರ ರಸ್ತೆಯಲ್ಲಿರುವ ಗುಹಾಂತರ ರೆಸಾರ್ಟ್‌ಗೆ ಹೋಗಿದ್ದಾರೆ. ಆನಂತರ ಲೋಹಿತ್ ಮತ್ತು ವಿದ್ಯಾ ಸ್ನೇಹಿತರು ಒಡಗೂಡಿ ಅಗಲಗುರ್ಕಿ ರೆಸಾರ್ಟ್‌ಗೆ ಹೋಗಿ ತಂಗಿದ್ದಾರೆ. ಈ ವೇಳೆ ವಿದ್ಯಾ ಮತ್ತು ಲೋಹಿತ್ ಏಕಾಂತವಾಗಿ ಸಿಮ್ಮಿಂಗ್ ಪೂಲ್‌ನಲ್ಲಿ ಈಜಾಡಿದ್ದಾರೆ. ಆನಂತರ ಕೊಠಡಿಗೆ ಹೋಗಿ ಏಕಾಂತವಾಗಿ ಕಾಲ ಕಳೆದಿದ್ದಾರೆ.

ಇದಾದ ಬಳಿಕ ವಿದ್ಯಾ ತಾವಿಬ್ಬರು ರೆಸಾರ್ಟ್​ನಲ್ಲಿ ಜೊತೆಗಿದ್ದ ಪೋಟೋವನ್ನು ತೋರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ರೆಸಾರ್ಟ್​ನಲ್ಲಿ ಜೊತೆಗಿದ್ದ ಪೋಟೊವನ್ನು ತೋರಿಸಿ 1 ಕೋಟಿ ರೂ ಹಣ ನೀಡುವಂತೆ ಗೆಳೆಯನೊಂದಿಗೆ ಬಂದಿ ವಿದ್ಯಾ ಲೋಹಿತ್​ಗೆ ಬೇಡಿಕೆ ಇಟ್ಟಿದ್ದಾಳೆ.

ವಿದ್ಯಾ ಜತೆ ಏಕಾಂತವಾಗಿ ಕಳೆದ ಪೋಟೋಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದರೆ ಮರ್ಯಾದೆ ಹೋಗುತ್ತದೆ ಎಂದು ಭಯಗೊಂಡ ಲೋಹಿತ್ ಒಂದಷ್ಟು ಹಣ ಕೊಟ್ಟು ಇತ್ಯರ್ಥ ಮಾಡಿಕೊಳ್ಳಲು ಮುಂದಾಗಿದ್ದಾನೆ. ಆದರೆ ಕಡಿಮೆ ಹಣಕ್ಕೆ ಒಪ್ಪದ ವಿದ್ಯಾ ಒಂದು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾಳೆ. ಹೀಗೆ ದಿನ ಕಳೆಯುತ್ತಿದ್ದ ಗುತ್ತಿಗೆದಾರ ಲೋಹಿತ್‌ಗೆ ಪೆನ್ ಡ್ರೈವ್ ಕೊಟ್ಟು ಕಳಿಸಿದ್ದು, ಅದನ್ನು ನೋಡಿ ಮತ್ತಷ್ಟು ಗಾಬರಿಯಾಗಿದ್ದಾನೆ.

ಇಷ್ಟಕ್ಕೂ ಲೋಹಿತ್​ ಜಗ್ಗದಿದ್ದಾಗ ವಿದ್ಯಾ ಮದುವೆಯಾಗಿ ವಂಚಿಸಿರುವುದಾಗಿ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಸಿದ್ದಾಳೆ. ಇದಾದ ಬಳಿಕ ಲೋಹಿತ್​ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

ಇನ್ನು ಆರೋಪಿತೆ ವಿದ್ಯಾ ಇದೇ ರೀತಿ ಅನೇಕರಿಗೆ ಹನಿಟ್ರ್ಯಾಪ್​ ಮಾಡಿರುವುದು ತಿಳಿದು ಬಂದಿದೆ. ಅಷ್ಟೇ ಅಲ್ಲದೇ ಈಕೆ ತಾನು ತಮಿಳುನಾಡು ಕಾಂಗ್ರೆಸ್ ಸದಸ್ಯೆ ಎಂದು ಹೇಳಿಕೊಂಡು ವಂಚಿಸಿರುವುದು ತನಿಖೆ ವೇಳೆ ಬಯಲಾಗಿದೆ.

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...