Sun,May19,2024
ಕನ್ನಡ / English

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂಸ್

14 Oct 2021
3897

ಬೆಂಗಳೂರು : ಹರ್ಬಲ್ ಲೈಫ್ ಮೆಡಿಸಿನ್ ಕೊಡುವ ನೆಪದಲ್ಲಿ ಹನಿಟ್ರ್ಯಾಪ್ ಮಾಡಿ ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಆರೋಪದ ಮೇಲೆ ಈಕೆಯನ್ನು ಬಂಧಿಸಲಾಗಿದೆ.

ನಗರದಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಮಹಿಳೆಯೊಬ್ಬಳಿಂದ ವಂಚನೆಗೊಳ್ಳಗಾದ ಕಂಟ್ರಾಕ್ಟರ್​ ಒಬ್ಬರು ಈ ಸಂಬಂಧ ದೂರು ನೀಡಿದ್ದರು. ಈ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತೆಯನ್ನು ವಿದ್ಯಾ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಸಿವಿಲ್ ಕಾಂಟ್ರಾಕ್ಟರ್ ಲೋಹಿತ್ ಎಂಬುವವರು ಈಕೆ ವಿರುದ್ಧ ದೂರು ನೀಡಿದ್ದರು. ಫೋಟೋಗಳನ್ನು ತೋರಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಆರೋಪದ ಮೇಲೆ ಈಕೆಯನ್ನು ಬಂಧಿಸಲಾಗಿದೆ.

ಘಟನೆ :
ಹರ್ಬಲ್ ಲೈಫ್ ಪ್ರಾಡಕ್ಟ್ ಹೆಸರಿನಲ್ಲಿ ಸಿವಿಲ್​ ಕಂಟ್ರಾಕ್ಟರ್ ಲೋಹಿತ್​ ಅವರನ್ನು ಇಬ್ಬರು ಹುಡುಗರು ಭೇಟಿಯಾಗಿದ್ದರು. ಈ ವೇಳೆ ತಮ್ಮ ಉತ್ಪನ್ನದ ಕುರಿತು ತಿಳಿಸಿದ ಅವರು ಈ ಪ್ರೋಡಕ್ಟ್​ ಬೇಕಿದ್ದರೆ, ಈ ನಂಬರ್​ಗೆ ಕರೆ ಮಾಡಿ ಎಂದು ವಿದ್ಯಾ ನಂಬರ್​ ಕೊಟ್ಟಿದ್ದರು. ಈ ವೇಳೆ ಕರೆ ಮಾಡಿದಾಗ, ಆರೋಪಿತೆ ವಿದ್ಯಾ ಜೊತೆ ಹರ್ಬಲ್ ಲೈಫ್ ಪ್ರೊಡಕ್ಟ್ ಖರೀದಿ ವಿಚಾರವಾಗಿ ಲೋಹಿತ್​ಗೆ ಸ್ನೇಹ ಬೆಳೆದಿದೆ. ಇದಾದ ಬಳಿಕ ಇಬ್ಬರ ನಡುವಿನ ಸಂಭಾಷಣೆ ಸ್ನೇಹಕ್ಕೆ ತಿರುಗಿದೆ.

ಇಬ್ಬರ ನಡುವಿನ ಪರಿಚಯ ರೆಸಾರ್ಟ್‌ಗೆ ಹೋಗಿ ಏಕಾಂತದಲ್ಲಿ ಕಳೆಯುವ ಹಂತಕ್ಕೆ ತಲುಪಿತ್ತು. ಇಬ್ಬರೂ ಒಮ್ಮೆ ಕನಕಪುರ ರಸ್ತೆಯಲ್ಲಿರುವ ಗುಹಾಂತರ ರೆಸಾರ್ಟ್‌ಗೆ ಹೋಗಿದ್ದಾರೆ. ಆನಂತರ ಲೋಹಿತ್ ಮತ್ತು ವಿದ್ಯಾ ಸ್ನೇಹಿತರು ಒಡಗೂಡಿ ಅಗಲಗುರ್ಕಿ ರೆಸಾರ್ಟ್‌ಗೆ ಹೋಗಿ ತಂಗಿದ್ದಾರೆ. ಈ ವೇಳೆ ವಿದ್ಯಾ ಮತ್ತು ಲೋಹಿತ್ ಏಕಾಂತವಾಗಿ ಸಿಮ್ಮಿಂಗ್ ಪೂಲ್‌ನಲ್ಲಿ ಈಜಾಡಿದ್ದಾರೆ. ಆನಂತರ ಕೊಠಡಿಗೆ ಹೋಗಿ ಏಕಾಂತವಾಗಿ ಕಾಲ ಕಳೆದಿದ್ದಾರೆ.

ಇದಾದ ಬಳಿಕ ವಿದ್ಯಾ ತಾವಿಬ್ಬರು ರೆಸಾರ್ಟ್​ನಲ್ಲಿ ಜೊತೆಗಿದ್ದ ಪೋಟೋವನ್ನು ತೋರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ರೆಸಾರ್ಟ್​ನಲ್ಲಿ ಜೊತೆಗಿದ್ದ ಪೋಟೊವನ್ನು ತೋರಿಸಿ 1 ಕೋಟಿ ರೂ ಹಣ ನೀಡುವಂತೆ ಗೆಳೆಯನೊಂದಿಗೆ ಬಂದಿ ವಿದ್ಯಾ ಲೋಹಿತ್​ಗೆ ಬೇಡಿಕೆ ಇಟ್ಟಿದ್ದಾಳೆ.

ವಿದ್ಯಾ ಜತೆ ಏಕಾಂತವಾಗಿ ಕಳೆದ ಪೋಟೋಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದರೆ ಮರ್ಯಾದೆ ಹೋಗುತ್ತದೆ ಎಂದು ಭಯಗೊಂಡ ಲೋಹಿತ್ ಒಂದಷ್ಟು ಹಣ ಕೊಟ್ಟು ಇತ್ಯರ್ಥ ಮಾಡಿಕೊಳ್ಳಲು ಮುಂದಾಗಿದ್ದಾನೆ. ಆದರೆ ಕಡಿಮೆ ಹಣಕ್ಕೆ ಒಪ್ಪದ ವಿದ್ಯಾ ಒಂದು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾಳೆ. ಹೀಗೆ ದಿನ ಕಳೆಯುತ್ತಿದ್ದ ಗುತ್ತಿಗೆದಾರ ಲೋಹಿತ್‌ಗೆ ಪೆನ್ ಡ್ರೈವ್ ಕೊಟ್ಟು ಕಳಿಸಿದ್ದು, ಅದನ್ನು ನೋಡಿ ಮತ್ತಷ್ಟು ಗಾಬರಿಯಾಗಿದ್ದಾನೆ.

ಇಷ್ಟಕ್ಕೂ ಲೋಹಿತ್​ ಜಗ್ಗದಿದ್ದಾಗ ವಿದ್ಯಾ ಮದುವೆಯಾಗಿ ವಂಚಿಸಿರುವುದಾಗಿ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಸಿದ್ದಾಳೆ. ಇದಾದ ಬಳಿಕ ಲೋಹಿತ್​ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

ಇನ್ನು ಆರೋಪಿತೆ ವಿದ್ಯಾ ಇದೇ ರೀತಿ ಅನೇಕರಿಗೆ ಹನಿಟ್ರ್ಯಾಪ್​ ಮಾಡಿರುವುದು ತಿಳಿದು ಬಂದಿದೆ. ಅಷ್ಟೇ ಅಲ್ಲದೇ ಈಕೆ ತಾನು ತಮಿಳುನಾಡು ಕಾಂಗ್ರೆಸ್ ಸದಸ್ಯೆ ಎಂದು ಹೇಳಿಕೊಂಡು ವಂಚಿಸಿರುವುದು ತನಿಖೆ ವೇಳೆ ಬಯಲಾಗಿದೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...