ಪ್ರೇಮ ವೈಫಲ್ಯ: ಕೊಡಗು ಮೂಲದ ಯುವಕ ಮಧ್ಯಪ್ರದೇಶದಲ್ಲಿ ಆತ್ಮಹತ್ಯೆ | ಜನತಾ ನ್ಯೂಸ್
ಕೊಡಗು : ಮಧ್ಯ ಪ್ರದೇಶದಲ್ಲಿ ಕೊಡಗು ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರೇಮ ವೈಫಲ್ಯದ ಹಿನ್ನೆಲೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸುಳುಗೋಡಿನ ದರ್ಶನ್ ಮಧ್ಯಪ್ರದೇಶದ ಸಿಂಗ್ರೋಳ್ಳಿ ಎಂಬಲ್ಲಿ ಉದ್ಯೋಗದಲ್ಲಿದ್ದ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ ಎಂದು ತಿಳಿದುಬಂದಿದೆ.
ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗಿದೆ. ಪ್ರೀತಿಸುತ್ತಿದ್ದ ಯುವತಿ ವಿವಾಹ ನಿರಾಕರಿಸಿ ಬೇರೊಬ್ಬನನ್ನು ಪ್ರೀತಿಸಲು ಆರಂಭಿಸಿದ್ದರಿಂದ ಮನನೊಂದ ದರ್ಶನ್ ಸಾವಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ದರ್ಶನ್, ತನ್ನದೇ ಊರಿನ ದಿವ್ಯಾ ಎಂಬಾಕೆಯನ್ನ 8 ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ ದರ್ಶನ್ ಜೊತೆ ವಿವಾಹ ನಿರಾಕರಿಸಿ ದಿವ್ಯಾ ಕಳೆದ ನಾಲ್ಕು ತಿಂಗಳಿನಿಂದ ಪೊಲೀಸ್ ಒಬ್ಬರನ್ನು ಪ್ರೀತಿಸುತ್ತಿದ್ದರು.
ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಡೆತ್ ನೋಟ್ ಬರೆದಿರುವ ದರ್ಶನ್, ತನ್ನ ಸಾವಿಗೆ ದಿವ್ಯಾ ಮತ್ತು ಮನೆಯವರು ಕಾರಣ ಎಂದು ಉಲ್ಲೇಖ ಮಾಡಿದ್ದಾನೆ ಎನ್ನಲಾಗಿದೆ.