ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿಗೆ ಹೃದಯಾಘಾತ: ಕುಸಿದು ಬಿದ್ದು ಸಾವು | ಜನತಾ ನ್ಯೂಸ್
ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಾಲೇಜಿಗೆ ತೆರಳಿದ್ದ ವಿದ್ಯಾರ್ಥಿಯೊಬ್ಬ ದಿಢೀರ್ ಕುಸಿದುಬಿದ್ದು ಕೊನೆಯುಸಿರೆಳೆದಿದ್ದಾರೆ. ನಗರದ ವೆಂಕಟೇಶ್ವರ ಪಿಯು ಕಾಲೇಜಿನಲ್ಲಿ ಈ ದುರ್ಘಟನೆ ನಡೆದಿದೆ.
ಚಿತ್ರದುರ್ಗ ನಗರದ ನಿವಾಸಿ ಪ್ರಕಾಶ್ ಮೃತ ವಿದ್ಯಾರ್ಥಿ. ಕಾಲೇಜಿಗೆ ಬಂದ ಪ್ರಕಾಶ್ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಪ್ರಕಾಶ್ ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡ್ತಿದ್ದ. ಇಂದು ಬೆಳಗ್ಗೆ ಕಾಲೇಜಿಗೆ ಬಂದಿದ್ದ. ಕಾಲೇಜು ಮೆಟ್ಟಿಲೇರುವಾಗ ಸುಸ್ತಾಗಿ ಕುಳಿತಿದ್ದ. ಇದಾದ ಬೆನ್ನಲ್ಲೇ ಕಾಲೇಜು ಸಿಬ್ಬಂದಿ ಪಾಲಕರಿಗೆ ತಿಳಿಸಿ, ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.
ಹೃದಯಾಘಾತದಿಂದ ಓಂ ಪ್ರಕಾಶ್ ಸಾವು ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.