ರಾಜ್ಯ ಉಪಚುನಾವಣೆ : ಒಂದೊಂದು ಸ್ಥಾನ ಗೆದ್ದುಕೊಂಡ ಬಿಜೆಪಿ, ಕಾಂಗ್ರೆಸ್ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ನಡೆದ ಉಪಚುನಾವಣೆಯ ಫಲಿತಾಂಶಗಳು ನಿನ್ನೆ ಮಂಗಳವಾರ ಪ್ರಕಟವಾಗಿದ್ದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯ ಹಾನಗಲ್ನಲ್ಲಿ ಬಿಜೆಪಿಯ ಸೋಲು ನುಂಗಲಾಗದ ತುತ್ತಾಗಿದೆ. ಈಗಷ್ಟೇ 100 ದಿನಗಳ ಸರ್ಕಾರ ಪೂರೈಸುತ್ತಿರುವ ಸಿಎಂ ಬೊಮ್ಮಾಯಿ ಅವರಿಗೆ ಹಾನಗಲ್ನಲ್ಲಿ ಭಾರೀ ನಷ್ಟ ಉಂಟಾಗಿದೆ.
ಸಿಂದಗಿ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಮತ್ತು ಹಾನಗಲ್ನಲ್ಲಿ ಬಿಜೆಪಿಯ ಸಿ.ಎಂ.ಉದಾಸಿ ಅವರ ನಿಧನದ ಹಿನ್ನೆಲೆಯಲ್ಲಿ ಎರಡು ಸ್ಥಾನಗಳು ತೆರವಾದ ಕಾರಣ ಉಪಚುನಾವಣೆ ಅನಿವಾರ್ಯವಾಗಿತ್ತು.
ಏತನ್ಮಧ್ಯೆ, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ ಅವರು ಕಾಂಗ್ರೆಸ್ನ ಸಮೀಪದ ಪ್ರತಿಸ್ಪರ್ಧಿಯನ್ನು 31,185 ಮತಗಳ ಭಾರಿ ಅಂತರದಿಂದ ಸೋಲಿಸಿದ್ದಾರೆ. ಬಿಜೆಪಿಯ ಭೂಸನೂರ 93,865 ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ನ ಅಶೋಕ ಮನಗೂಳಿ 62,680 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹಾನಗಲ್ನಲ್ಲಿ ಕಾಂಗ್ರೆಸ್ನ ಶ್ರೀನಿವಾಸ್ ಮಾನೆ 87,490 ಮತಗಳನ್ನು ಗಳಿಸಿ 7,373 ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಿವರಾಜ್ ಸಜ್ಜನರ್ 80,117 ಮತಗಳನ್ನು ಪಡೆದರು.
ಸಿಂದಗಿಯಿಂದ ಜೆಡಿಎಸ್ನ ನಾಜಿಯಾ ಶಕೀಲ್ ಅಹ್ಮದ್ ಅಂಗಡಿ ಮತ್ತು ಹಾನಗಲ್ನಲ್ಲಿ ನಿಯಾಜ್ ಶೇಖ್ ಕ್ರಮವಾಗಿ 4,353 ಮತ್ತು 927 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನ ಪಡೆದರು.