ಅಪ್ಪು ಸದಾ ನಮ್ಮ ಹೃದಯದಲ್ಲಿ ನಗುತ್ತಿರುತ್ತಾರೆ, ಕಣ್ಣೀರು ಹಾಕುತ್ತಲೇ ತೆರಳಿದ ನಟ ಸೂರ್ಯ! | ಜನತಾ ನ್ಯೂಸ್
ಬೆಂಗಳೂರು : ಇಂದು ಅಪ್ಪು ಸಮಾಧಿ ಬಳಿ ಆಗಮಿಸಿದ ನಟ ಸೂರ್ಯ, ಅಪ್ಪು ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಭೇಟಿ ಕೊಟ್ಟ ತಮಿಳಿನ ನಟ ಸೂರ್ಯ ಕಣ್ಣೀರು ಹಾಕಿದರು.
ಇದು ಬಹಳ ಅನ್ಯಾಯ. ಈ ರೀತಿ ಆಗಬಾರದಿತ್ತು. ಏನು ಜರುಗಿದೆ ಅದನ್ನು ಈಗಲೂ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಮ್ಮ ಹಾಗೂ ಡಾ. ರಾಜ್ ಕುಮಾರ್ ಅವರ ಕುಟುಂಬ ಬಹಳ ಆತ್ಮೀಯತೆ ಮತ್ತು ಉತ್ತಮ ಬಾಂಧವ್ಯ ಹೊಂದಿದ್ದೇವೆ.
ಅಪ್ಪು ಅಗಲಿಕೆ ಸಹಿಸಲಾಗದು. ಅಣ್ಣಾವ್ರು ನನಗೆ ಮಾದರಿಯಾಗಿದರು. ನನಗೆ ನಾಲ್ಕು ತಿಂಗಳು ಇದ್ದಾಗ, ಅಪ್ಪುಗೆ ಏಳು ತಿಂಗಳು. ನಮ್ಮ ಹಳೆಯ ಫೋಟೋಗಳಲ್ಲಿ ಅಪ್ಪು ಯಾವಾಗಲೂ ನಗುತ್ತಿದ್ದರು. ಈಗ ನಮ್ಮ ಹೃದಯಗಳಲ್ಲಿ ಅಪ್ಪು ನಗುತ್ತಾರೆ. ಎಲ್ಲ ಕನ್ನಡಿಗರಿಗೂ ನಾನು ಏನು ಹೇಳಬೇಕೋ ತೋಚುತ್ತಿಲ್ಲ. ದೇವರು ಅವರ ಆತ್ಮಕ್ಕೆ ಶಾಂತಿ ಮತ್ತು ಧೈರ್ಯ ನೀಡಲಿ ಎಂದು ಕಣ್ಣೀರು ಹಾಕಿದರು.