ರಾಜ್ಯದಲ್ಲಿ ಕೊರೋನಾ ಹೆಚ್ಚಳ:ಇಂದು 313 ಜನರಿಗೆ ಸೋಂಕು | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 313 ಹೊಸ ಪ್ರಕರಣಗಳು ವರದಿಯಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 369 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಪಾಸಿಟಿವಿಟಿ ದರ ಶೇಕಡ 0.36 ರಷ್ಟಿದೆ. ರಾಜ್ಯದಲ್ಲಿ 7349 ಸಕ್ರಿಯ ಪ್ರಕರಣಗಳು ಇವೆ. ಇದುವರೆಗೆ 29,47,354 ಜನ ಗುಣಮುಖರಾಗಿದ್ದಾರೆ. 38,165 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,92,897 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 179 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. 236 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6051 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು ನಗರ 179, ಹಾಸನ 13, ಮೈಸೂರು 51, ತುಮಕೂರು 20, ಉತ್ತರಕನ್ನಡ 11 ಹೊಸ ಪ್ರಕರಣ ವರದಿಯಾಗಿವೆ.
ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಕಲಬುರ್ಗಿ, ಹಾವೇರಿ, ಕೊಪ್ಪಳ, ಮಂಡ್ಯ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.
ಬೆಂಗಳೂರು ನಗರ 2, ರಾಮನಗರ 1, ಉತ್ತರಕನ್ನಡ 1 ಸೇರಿ ರಾಜ್ಯದಲ್ಲಿ ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ.