ವೀರ ಚಕ್ರ ಪ್ರಶಸ್ತಿ ಸ್ವೀಕರಿಸಿದ ಗ್ರೂಪ್ ಕ್ಯಾಪ್ಟನ್ ಅಭಿನಂದನ್ : ಶೌರ್ಯ ಚಕ್ರ, ಕೀರ್ತಿ ಚಕ್ರ ಸ್ವೀಕರಿಸಿದ ಹುತಾತ್ಮರ ಕುಟುಂಬ | ಜನತಾ ನ್ಯೂಸ್
ನವದೆಹಲಿ : ರಾಷ್ಟ್ರಪತಿಭವನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ ಅವರ ಉಪಸ್ಥಿತಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೇನೆಯ ಅತ್ಯುನ್ನತ ಪ್ರಶಸ್ತಿಗಳನ್ನು ಪ್ರಧಾನ ಮಾಡಿದರು.
ಮೇಜರ್ ವಿಭೂತಿ ಶಂಕರ್ ಧೌಂಡಿಯಾಲ್ ಅವರ ಪತ್ನಿ ಲೆಫ್ಟಿನೆಂಟ್ ನಿತಿಕಾ ಕೌಲ್ ಮತ್ತು ತಾಯಿ ಸರೋಜ್ ಧೌಂಡಿಯಾಲ್ ಅವರು ಇಂದು ಧೌಂಡಿಯಾಲ್ ಅವರ ಜಮ್ಮು ಮತ್ತು ಕಾಶ್ಮೀರದ ಕಾರ್ಯಾಚರಣೆಗಾಗಿ ಅವರ ಶೌರ್ಯ ಚಕ್ರವನ್ನು(ಮರಣೋತ್ತರ) ಸ್ವೀಕರಿಸಿದರು. ಈ ಕಾರ್ಯಚರಣೆಯಲ್ಲಿ ಐವರು ಭಯೋತ್ಪಾದಕರು ಕೊಲ್ಲಲ್ಪಟ್ಟರು ಮತ್ತು 200 ಕೆಜಿ ಸ್ಫೋಟಕಗಳನ್ನು ವಶಪಡಿಸಿಕೊಂಡರು.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎ++ ವರ್ಗದ ಭಯೋತ್ಪಾದಕನನ್ನು ಕೊಂದಿದ್ದಕ್ಕಾಗಿ ನೈಬ್ ಸುಬೇದಾರ್ ಸೋಂಬಿರ್ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರವನ್ನು ನೀಡಲಾಯಿತು. ಅವರ ಪತ್ನಿ ಮತ್ತು ತಾಯಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಕಾರ್ಪ್ಸ್ ಆಫ್ ಇಂಜಿನಿಯರ್ಸ್ನ ಸಪ್ಪರ್ ಪ್ರಕಾಶ್ ಜಾಧವ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರನ್ನು ತಟಸ್ಥಗೊಳಿಸಿದ್ದಕ್ಕಾಗಿ ಎರಡನೇ ಅತಿ ಹೆಚ್ಚು ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ ಕೀರ್ತಿ ಚಕ್ರ(ಮರಣೋತ್ತರ) ನೀಡಿದರು. ಅವರ ಪತ್ನಿ ಮತ್ತು ತಾಯಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ವಿಂಗ್ ಕಮಾಂಡರ್(ಈಗ ಗ್ರೂಪ್ ಕ್ಯಾಪ್ಟನ್) ವರ್ಧಮಾನ್ ಅಭಿನಂದನ್ ಅವರು ರಾಷ್ಟ್ರಪತಿ ಕೋವಿಂದ್ ಅವರಿಂದ ವೀರ ಚಕ್ರ ಪ್ರಶಸ್ತಿಯನ್ನು ಸ್ವಿಕರಿಸಿದ್ದಾರೆ. ಭಾರತದ ಗಡಿಯಲ್ಲಿ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ ಅವರು, ತಮ್ಮ ಯುದ್ಧವಿಮಾನ ಪಾಕ್ ಪ್ರದೇಶದಲ್ಲಿ ಪತನವಾದ ಬಳಿಕ ಕೆಲಕಾಲ ಶತ್ರು ಪಾಳಯದಲ್ಲಿ ಇದ್ದಾಗಲೂ ಎದ್ದುಕಾಣುವ ಧೈರ್ಯವನ್ನು ತೋರಿಸಿದರು, ವೈಯಕ್ತಿಕ ಸುರಕ್ಷತೆಯನ್ನು ಕಡೆಗಣಿಸುವಾಗ ಶತ್ರುಗಳ ಮುಖದಲ್ಲಿ ಶೌರ್ಯವನ್ನು ಪ್ರದರ್ಶಿಸಿದರು ಮತ್ತು ಕರ್ತವ್ಯದ ಅಸಾಧಾರಣ ಪ್ರಜ್ಞೆಯನ್ನು ಪ್ರದರ್ಶಿಸಿದ್ದರು.