ಸಿಎಂ ಬೊಮ್ಮಾಯಿ ಜೊತೆ ಪ್ರವಾಹ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ | ಜನತಾ ನ್ಯೂಸ್
ಬೆಂಗಳೂರು : ಕಳೆದ ಎರಡು ವಾರಗಳಿಂದ ರಾಜ್ಯದ ಬಹುತೇಕ ಕಡೆ ಅಕಾಲಿಕ ಮಳೆ ಬಿಟ್ಟೂ ಬಿಡದೆ ಸುರಿಯುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕರೆ ಮಾಡಿ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಮಳೆ ಅವಾಂತರದ ಕುರಿತು ಮಾನ್ಯ ಪ್ರಧಾನ ಮಂತ್ರಿಗಳು ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ.
ರಾಜ್ಯದಲ್ಲಿ ಮಳೆ ಸೃಷ್ಟಿಸಿರುವ ಅವಾಂತರ ಕುರಿತು ಮಾಹಿತಿ ಪಡೆದ ಅವರು ಬೆಂಗಳೂರಿನ ಮಳೆಹಾನಿ ಬಗ್ಗೆಯೂ ಮಾತುಕತೆ ನಡೆಸಿ ಅಗತ್ಯ ನೆರವು ನೀಡುವುದಾಗಿ ಹೇಳಿದ್ದಾರೆ ಎಂದಿದ್ದಾರೆ.
ಗೃಹ ಮಂತ್ರಿ ಅಮಿತ್ ಶಾ ಕೂಡ ಈ ಕುರಿತು ಮಾತನಾಡಿದ್ದು ಮಳೆ ಹಾನಿಗೆ ಒಳಗಾಗಿರುವ ರಾಜ್ಯಕ್ಕೆ ಅಗತ್ಯ ನೆರೆವು ನೀಡುವುದಾಗಿ ಭರವಸೆ ನಿಡಿದ್ದಾರೆಂದು ಸಿಎಂ ಬೊಮ್ಮಾಯಿ ತಿಳಿಸಿದರು.