ಮತಾಂತರ ತಡೆ ಕಾನೂನು ತರುವ ಪ್ರಯತ್ನ ನಮ್ಮ ಸರ್ಕಾರ ಮಾಡುತ್ತಿದೆ: ಜನರಿಗೆ ಆತಂಕ ಬೇಡ | ಜನತಾ ನ್ಯೂಸ್
ಹುಬ್ಬಳ್ಳಿ : ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ, ಮತಾಂತರ ಅನ್ನೋದು ಸಮಾಜಕ್ಕೆ ಒಳ್ಳೆಯದಲ್ಲ. ಕಾನೂನು ತರುವ ಪ್ರಯತ್ನ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ. ಅವರಿಗೆ ಯಾವುದೇ ಆತಂಕ ಬೇಡ. ಈಗಾಗಲೇ ಕ್ರಿಶ್ಚಿಯನ್ ಸಮುದಾಯ ನಾಯಕರಿಗೆ ನಾನು ಹೇಳಿದ್ದೇನೆ. ಅವರಿಗೆ ಯಾವುದೇ ತೊಂದರೆಯಾಗಲ್ಲ. ಬದಲಾಗಿ ಬಡತನ ದುರುಪಯೊಗ ಮಾಡಿಕೊಂಡು ಮತಾಂತರ ಮಾಡೋದು ತಪ್ಪು. ಮತಾಂತರ ಕಾಯ್ದೆ ಚರ್ಚೆಗೂ ಮೊದಲು ಒಂದು ಕಮಟಿ ಮಾಡಿದ್ದೇವೆ.
ಕಾನೂನು ಇಲಾಖೆಯ ಕಮಿಟಿ ಪರಿಶೀಲನೆ ಮಾಡುತ್ತಿದೆ. ಆ ವರದಿ ಸಂಪುಟಕ್ಕೆ ಬರುತ್ತದೆ. ಬೆಳಗಾವಿಯಲ್ಲಿ ಸಂಪುಟ ಸಭೆ ನಡೆಸುತ್ತೇವೆ. ಅಲ್ಲಿಂದ ಅಧಿವೇಶನಕ್ಕೆ ಮಸೂದೆ ಬಂದರೆ ಅಲ್ಲಿಯೇ ಚರ್ಚೆ ಮಾಡುತ್ತೇವೆ ಎಂದರು.
ಬಡತನದ ದುರುಪಯೋಗ ಪಡೆದು, ಆಸೆ, ಆಮಿಷಗಳನ್ನು ಒಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ. ಮತಾಂತರದ ವಿಷಯ ಇಂದಿನದಲ್ಲ, ಈ ಬಗ್ಗೆ ಸ್ವತಂತ್ರದ ನಂತರದಲ್ಲಿ ಬಹಳ ದೊಡ್ಡ ಚರ್ಚೆಯಾಗಿದೆ. ವಿವಿಧ ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದರು.