Wed,Apr24,2024
ಕನ್ನಡ / English

ಪಂಜಾಬ್‌ನಲ್ಲಿ ಭತ್ತದ ತಳಿಗೆ ದೇವೇಗೌಡ ಹೆಸರು! | ಜನತಾ ನ್ಯೂಸ್

13 Dec 2021
2537

ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡರಿಗೆ ಪಂಜಾಬ್​ನ ರೈತರು ಅತ್ಯುತ್ತಮ ಭತ್ತದ ತಳಿವೊಂದಕ್ಕೆ "ದೇವೇಗೌಡ" ಎಂದು ಹೆಸರಿಟ್ಟು ಅಭಿಮಾನ ಮೆರೆದಿದ್ದಾರೆ.

ಸದನದ ಒಳಗೆ ಮತ್ತು ಹೊರಗೆ ರೈತ ಸಮುದಾಯದ ಪರ ಹೆಚ್‌.ಡಿ ದೇವೇಗೌಡರಿಗೆ ಇರುವ ಬದ್ಧತೆಯ ಗೌರವಾರ್ಥವಾಗಿ ಅವರ ಹೆಸರನ್ನೇ ಇಟ್ಟಿದ್ದಾರಂತೆ. ಗೌಡರು ಶಾಸಕರಾಗಿ, ಸಂಸದರಾಗಿ ಯಾವತ್ತೂ ಸದನದ ಶಿಷ್ಟಾಚಾರ ಉಲ್ಲಂಘಿಸಿಲ್ಲ.

ಆದರೆ ರೈತರ ಹಿತಕ್ಕೆ ಬೆದರಿಕೆ ಬಂದಾಗ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಒಮ್ಮೆ ಮಾತ್ರ ಈ ಸ್ವಯಂ ಪ್ರೇರಿತ ತತ್ವವನ್ನು ಉಲ್ಲಂಘಿಸಿದ್ದರು ಎಂದು ಪತ್ರಕರ್ತ ಸುಗತ ಶ್ರೀನಿವಾಸರಾಜು ತಮ್ಮ "ಫುರೋಸ್‌ ಇನ್‌ ಎ ಫೀಲ್ಡ್‌: ದಿ ಅನ್‌ಎಕ್ಸ್‌ಪ್ಲೋರ್ಡ್‌ ಲೈಫ್ ಆಫ್" (Furrows in a Field: The Unexplored Life of) ಪುಸ್ತಕದಲ್ಲಿ ಬರೆದಿದ್ದಾರೆ.

1991ರ ಜುಲೈ 31 ಮತ್ತು ಆಗಸ್ಟ್‌ 1ರ ಘಟನೆಯನ್ನು ಈ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಅಂದು ಮನಮೋಹನ್ ಸಿಂಗ್ ನೇತೃತ್ವದ ಮೊದಲ ಬಜೆಟ್ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿತ್ತು.

ಅಂದು ಸದನದ ಬಾವಿಗಿಳಿದ ದೇವೇಗೌಡರು, ನಾನೊಬ್ಬ ರೈತ. ಭೂಮಿ ಉಳುವವನ ಮಗ. ರೈತರಿಗೆ ಸಬ್ಸಿಡಿಗಳನ್ನು ಕೊನೆಗೊಳಿಸುವ ನಿರ್ಧಾರವನ್ನು ಸರ್ಕಾರ ಈ ಕೂಡಲೇ ಹಿಂತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸರ್ಕಾರದ ನಿರ್ಧಾರವನ್ನ ಒಪ್ಪುವುದಿಲ್ಲ. ಹಿಂಪಡೆಯುವವರೆಗೂ ಸದನದಿಂದ ಹೊರಗೆ ಹೋಗಲ್ಲ ಎಂದಯ ಪಟ್ಟು ಹಿಡಿದು ಕೂತಿದ್ದರ ಬಗ್ಗೆ ಪ್ರಸ್ತಾಪಿಸಲಾಗಿದೆ.

2002 ರಲ್ಲಿ, ಭಾರತದಾದ್ಯಂತ ದೊಡ್ಡ ಸಂಖ್ಯೆಯಲ್ಲಿ ರೈತರ ಆತ್ಮಹತ್ಯೆಗಳು ವರದಿಯಾದಾಗ, ಗೌಡರು ಕರ್ನಾಟಕದಿಂದ ಸುಮಾರು 2,000 ರೈತರ ನಿಯೋಗವನ್ನು ರೈಲಿನಲ್ಲಿ ದೆಹಲಿಗೆ ಕರೆದೊಯ್ದು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿ ಮಾಡಿದರು.

ಇದು ಅಭೂತಪೂರ್ವವಾಗಿದೆ. ವಿಶೇಷವಾಗಿ ಮಾಜಿ ಪ್ರಧಾನಿಯೊಬ್ಬರು ಈ ರೀತಿ ಪ್ರತಿಭಟಿಸಿದರು. ದೆಹಲಿಯ ಜನರು ದಿಗ್ಭ್ರಮೆಗೊಂಡರು, ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಪ್ರಕಟಿಸಿದ ಪುಸ್ತಕದಲ್ಲಿ ಹೇಳಲಾಗಿದೆ. ರೈತರ ಪರ ಗೌಡರಿಗಿದ್ದ ಬದ್ಧತೆಗಾಗಿ ಪಂಜಾಬ್‌ನ ರೈತರು ಅತ್ಯುತ್ತಮ ಭತ್ತದ ತಳಿಗಳಲ್ಲಿ ಒಂದಕ್ಕೆ ಗೌಡರ ಹೆಸರಿಟ್ಟಿದ್ದಾರೆ.

RELATED TOPICS:
English summary :Devegowda

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...