ಅತ್ಯಾಚಾರ ಅನಿವಾರ್ಯವಾದಾಗ ಮಲಗಿ ಆನಂದಿಸಿ - ಹೇಳಿಕೆಗೆ ಕ್ಷಮೆಯಾಚಿಸಿದ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ | ಜನತಾ ನ್ಯೂಸ್
ಬೆಂಗಳೂರು : ಕರ್ನಾಟಕ ವಿಧಾನಸಭೆಯೊಳಗೆ "ಅತ್ಯಾಚಾರ ಅನಿವಾರ್ಯವಾದಾಗ ಅದನ್ನು ಮಲಗಿ ಆನಂದಿಸಿ" ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣವಾಗಿದ್ದ ಹಿರಿಯ ಕಾಂಗ್ರೆಸ್ ಶಾಸಕ ಮತ್ತು ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಅವರು ಶುಕ್ರವಾರ ತಮ್ಮ ತಪ್ಪು ಹೇಳಿಕೆಗಾಗಿ ಕ್ಷಮೆಯಾಚಿಸಿದರು.
ಈ ಕುರಿತು ನಿನ್ನೆ ಕ್ಷಮೆಕೋರಿ ಟ್ವೀಟ್ ಮಾಡಿರುವ ಕೆ.ಆರ್.ರಮೇಶ್ ಕುಮಾರ್ ಅವರು, "ಅತ್ಯಾಚಾರ!" ಕುರಿತು ಇಂದಿನ ವಿಧಾನಸಭೆಯಲ್ಲಿ ನಾನು ಮಾಡಿದ ಅಸಡ್ಡೆ ಮತ್ತು ನಿರ್ಲಕ್ಷ್ಯದ ಕಾಮೆಂಟ್ಗಾಗಿ ನಾನು ಎಲ್ಲರಿಗೂ ನನ್ನ ಪ್ರಾಮಾಣಿಕ ಕ್ಷಮೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ನನ್ನ ಉದ್ದೇಶವು ಕ್ಷುಲ್ಲಕಗೊಳಿಸುವುದು ಅಥವಾ ಘೋರ ಅಪರಾಧವನ್ನು ಹಗುರಗೊಳಿಸುವುದು ಅಲ್ಲ, ಆದರೆ ಒಂದು ತಪ್ಪು ಹೇಳಿಕೆ! ನಾನು ಇನ್ನು ಮುಂದೆ ನನ್ನ ಪದಗಳನ್ನು ಎಚ್ಚರಿಕೆಯಿಂದ ಆರಿಸುತ್ತೇನೆ!, ಎಂದಿದ್ದಾರೆ.
ನಿನ್ನೆ ಸದನದಲ್ಲಿ ಮಾಡಿದ "ಅತ್ಯಾಚಾರ" ಹೇಳಿಕೆಗೆ ಸಂಬಂಧಿಸಿದಂತೆ ಇಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಕೆಆರ್ ರಮೇಶ್ ಕುಮಾರ್ ಮಾತನಾಡಿ, "ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದರೆ ಕ್ಷಮೆ ಕೇಳಲು ನನಗೆ ಯಾವುದೇ ತೊಂದರೆ ಇಲ್ಲ. ನಾನು ನನ್ನ ಹೃದಯದ ಕೆಳಗಿನಿಂದ ಕ್ಷಮೆಯಾಚಿಸುತ್ತೇನೆ", ಎಂದಿದ್ದಾರೆ ಎನ್ನಲಾಗಿದೆ.
ಬಳಿಕ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, "ಅವರು ಕ್ಷಮೆ ಯಾಚಿಸಿದ್ದಾರೆ, ಇನ್ನು ಹೆಚ್ಚು ಎಳೆದು ತರುವುದು ಬೇಡ", ಎಂದು ಸಭೆಗೆ ಹೇಳಿದ್ದಾರೆ.
I would like to express my sincere apologies to everyone for the indifferent and negligent comment I made in today’s assembly about “Rape!” My intention was not trivialise or make light of the heinous crime, but an off the cuff remark! I will choose my words carefully henceforth!
— K. R. Ramesh Kumar (@KRRameshKumar1) December 16, 2021
If it hurts the sentiments of women, I've no problem apologising. I apologize from the bottom of my heart: Congress MLA KR Ramesh Kumar in Karnataka Assembly on his 'rape' remark made in the House yesterday.
— ANI (@ANI) December 17, 2021
"He has apologized, let's not drag it further," says Speaker VH Kageri. pic.twitter.com/7u3HeaSbLr