ಚಾಕುವಿನಿಂದ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ | ಜನತಾ ನ್ಯೂಸ್
ಬೆಂಗಳೂರು : ಚಾಕುವಿನಿಂದ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಿಪ್ಪೇನಹಳ್ಳಿಯಲ್ಲಿ ನಡೆದಿದೆ.
ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೋರ್ವ ಡೆತ್ ನೋಟ್ ಬರೆದಿಟ್ಟು, ಬೆಳಗ್ಗೆ ಮನೆಯಿಂದ ಹೊರ ಬಂದು ಚಾಕುವಿನಿಂದ ಕುತ್ತಿಗೆ ಸೀಳಿಕೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರಿನ ಗುಬ್ಬಿ ಮೂಲದ ಮೋಹನ್ (29) ಮೃತ ಯುವಕ. ಈತ ಕಳೆದ ಐದಾರು ವರ್ಷಗಳಿಂದ ಗಾರ್ಮೆಂಟ್ಸ್ ಔಟ್ಲೇಟ್ ಶೋರೂಂನಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಎರಡು ತಿಂಗಳ ಹಿಂದೆ ತಮ್ಮ ಮನೆಯ ಗೃಹ ಪ್ರವೇಶ ಮಾಡಿದ್ದ.
ಸಿದ್ದಾರ್ಥ ನಗರದಲ್ಲಿ ವಾಸವಿದ್ದ ಮೋಹನ್ ಆತ್ಮಹತ್ಯೆಗೂ ಮುನ್ನಾ ಡೆತ್ ನೋಟ್ನಲ್ಲಿ ತನ್ನ ಸಾವಿಗೆ ತಾನೇ ಕಾರಣವೆಂದು ಉಲ್ಲೇಖಿಸಿದ್ದಾನೆ. ಸ್ಥಳದಲ್ಲಿ ಚಾಕು ಮತ್ತು ಡೆತ್ ನೋಟ್ ಪತ್ತೆಯಾಗಿದೆ.