ಜನಸಾಮಾನ್ಯರ ಬಗ್ಗೆ ಕಾಳಜಿ ತೋರಿಸಿ. ನಿಮ್ಮ ಪ್ರತಿಷ್ಠೆಗಳಿಗೆ ಜನರನ್ನು ಬಲಿ ಕೊಡಬೇಡಿ | ಜನತಾ ನ್ಯೂಸ್
ಬೆಂಗಳೂರು : ಒಮಿಕ್ರಾನ್ನಂತಹ ಪರಿಸ್ಥಿತಿಯಲ್ಲಿ ಇದೆಲ್ಲ ಬೇಕಿತ್ತಾ? ಇವರು ಪಾದಯಾತ್ರೆ ಸಕ್ಸಸ್ ಮಾಡ್ತಾರೋ, ಸರ್ಕಾರದವರು ತಡೀತಾರೋ ಗೊತ್ತಿಲ್ಲ. ಇದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಬಿಟ್ಟ ವಿಚಾರ. ಆದರೆ ಜನಸಾಮಾನ್ಯರ ಬಗ್ಗೆ ಕಾಳಜಿ ತೋರಿಸಿ. ನಿಮ್ಮ ಪ್ರತಿಷ್ಠೆಗಳಿಗೆ ಜನರನ್ನು ಬಲಿ ಕೊಡಬೇಡಿ ಮಾಜಿ ಮುಖ್ಯಮಂತ್ರಿ ಎಚ್, ಡಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಿಎಂ ಬಸವರಾಜು ಬೊಮ್ಮಾಯಿ ಸಮ್ಮುಖದಲ್ಲಿ ನಡೆಯುತ್ತಿದ್ದ ಕಾರ್ಯಕ್ರದಲ್ಲಿ ಅಭಿವೃದ್ಧಿ ವಿಚಾರವಾಗಿ ಸಚಿವ ಅಶ್ವತ್ಥ ನಾರಾಯಣ್ ಮತ್ತು ಸಂಸದ ಡಿ.ಕೆ.
ಸುರೇಶ್ ಕಿತ್ತಾಡಿಕೊಂಡಿದ್ದರು. ಗಂಡಸ್ತನ ಸೋರಿಸು ಬಾ ಎಂಬೆಲ್ಲ ಮಾತು ಶುರುವಾಗಿ ಇಡೀ ಕಾರ್ಯಕ್ರಮದಲ್ಲಿ ನಾನಾ? ನೀನಾ? ಎಂದು ಸಿಎಂ ಎದುರಲ್ಲೇ ಗಲಾಟೆ ಮಾಡಿಕೊಂಡಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಎಚ್ಡಿಕೆ, ರಾಮನಗರ ಜಿಲ್ಲೆಯನ್ನು ಅಭಿವೃದ್ಧಿ ಮಾಡಿದ್ದು ನಾನು. ಆದ್ರೆ ಅವರು ಕಿತ್ತಾಡ್ತಾ ಇದ್ದಾರೆ.
ಕನಕಪುರದಲ್ಲಿ ಇದ್ದ ಗುಂಡಾ ಸಂಸ್ಕೃತಿ ರಾಮನಗರಕ್ಕೆ ಎಂಟ್ರಿಯಾಗಲೂ ಬಿಡಬಾರದು. ಮುಂದೆ ರಾಮನಗರದಲ್ಲಿ ಯಾವ ರೀತಿ ನಡೆದುಕೊಳ್ಳುತ್ತೆವೆ ಎನ್ನುವುದಕ್ಕೆ ಇಂದು ನಡೆದ ಘಟನೆ ಉದಾಹರಣೆಯಾಗಿದೆ. ಹೀಗೆ ನಡೆದುಕೊಂಡರೆ ಜನರು ಬುದ್ದಿಕಲಿಸುತ್ತಾರೆ. ರಾಮನಗರಕ್ಕೆ ಯಾರ ಕೊಡುಗೆ ಎಷ್ಟು ಎನ್ನುವುದು ಗೊತ್ತು? ರಾಮನಗರದಲ್ಲಿ ನಾನು ಇರುವವೆಗೂ ಇಂಥಹ ಘಟನೆಗೆ ಅವಕಾಶ ಕೊಟ್ಟಿರಲಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧವಾಗಿ ವಾಗ್ದಾಳಿ ಮಾಡಿದ್ದಾರೆ.
ನಾನು ನಿಮ್ಮ ವಿಡಿಯೋಗಳನ್ನು ನೋಡಿದ್ದೇನೆ. ಮದುವೆಗೂ ಮುನ್ನ ಗಂಡು-ಹೆಣ್ಣು ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸ್ತಾರೆ. ನೀವು ಪ್ರೀ ಪಾದಯಾತ್ರೆ ಫೋಟೋ ಶೂಟ್ ಮಾಡಿಸಿದ್ದೀರಿ. ಚಾಮರಾಜನಗರದಿಂದ ಕಬ್ಬಿನ ಜ್ಯೂಸ್ ಬರಬೇಕಂತೆ. ಭಾಗವಹಿಸಿದವರಿಗೆ ಸರ್ಟಿಫಿಕೇಟ್ ಕೊಡ್ತಾರಂತೆ. ನಿಮ್ಮ ಹೈಟೆಕ್ ಪಾದಯಾತ್ರೆಯನ್ನು ಜನರು ಗಮನಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.