ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಕೋವಿಡ್-19 ದೃಢ | ಜನತಾ ನ್ಯೂಸ್
ನವದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕೋವಿಡ್-19 ಸೋಂಕಿಗೆ ಧನಾತ್ಮಕ ಪರೀಕ್ಷೆ ದೃಢಪಟ್ಟಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸ್ವಂತಃ ಈ ವಿಷಯವನ್ನು ದೃಡಪಡಿಸಿದ್ದಾರೆ. ಅವರು ಇತ್ತೀಚಿಗೆ ಚುನಾವಣೆ ಹೊಸ್ತಿಲಲ್ಲಿರುವ ರಾಜ್ಯಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದರು.
ನಾನು ಕೋವಿಡ್ಗೆ ಧನಾತ್ಮಕ ಪರೀಕ್ಷೆ ಮಾಡಿದ್ದೇನೆ. ಸೌಮ್ಯ ಲಕ್ಷಣಗಳು. ಮನೆಯಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು, ದಯವಿಟ್ಟು ನಿಮ್ಮನ್ನು ಪ್ರತ್ಯೇಕಿಸಿ ಮತ್ತು ನಿಮ್ಮನ್ನು ಪರೀಕ್ಷಿಸಿಕೊಳ್ಳಿ, ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ದೆಹಲಿ ರಾಜ್ಯದಲ್ಲಿ ಸಧ್ಯಕ್ಕೆ ರಾತ್ರಿ ಕರ್ಫ್ಯೂ ಚಾಲ್ತಿಯಲ್ಲಿದ್ದು, ಸೋಂಕಿನ ಶೇಕಡಾವಾರು ಆಧಾರದ ಮೇಲೆ ಸಂಪೂರ್ಣ ಕರ್ಫ್ಯೂ ನಿರ್ಧರಿಸುವ ಸಾಧ್ಯತೆಗಳಿವೆ.