ಸಿದ್ದರಾಮಯ್ಯ ಕಾನೂನಿಗೆ ಗೌರವ ಕೊಡುತ್ತಾರೆ ಎಂಬ ವಿಶ್ವಾಸ ಇದೆ | ಜನತಾ ನ್ಯೂಸ್
ಬೆಂಗಳೂರು : ಮೇಕೆದಾಟು ಪಾದಯಾತ್ರೆ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾನೂನಿಗೆ ಗೌರವ ಕೊಡುತ್ತಾರೆ ಎಂಬ ವಿಶ್ವಾಸ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಡಿ.ಕೆ. ಶಿವಕುಮಾರ್ ಅವರ ಮೇಕೆದಾಟು ಪಾದಯಾತ್ರೆ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ತರಹ ನಾಟಕದ ಡೈಲಾಗ್ಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ. ಡಿಕೆಶಿ ಕೆಪಿಸಿಸಿ ಅಧ್ಯಕ್ಷರು, ನನ್ನ ಸ್ನೇಹಿತರು. ಆದರೆ ಸಿದ್ದರಾಮಯ್ಯ ಸಿಎಂ ಆಗಿದ್ದವರು. ಪ್ರತಿಪಕ್ಷ ನಾಯಕರು. ಅವರಿಗೆ ಕಾನೂನು ಬಗ್ಗೆ ಗೊತ್ತಿದೆ. ಅವರು ಕಾನೂನಿಗೆ ಗೌರವ ಕೊಡುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು.
ಇದೇ ಸಂದರ್ಭದಲ್ಲಿ ತಾಕತ್ತಿದ್ದರೆ ಪಾದಯಾತ್ರೆ ತಡೆಯಿರಿ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ, ಈ ತಾಕತ್ತು, ಸೂರ್ಯ ಚಂದ್ರ ಇದರ ಬಗ್ಗೆ ಉತ್ತರ ಕೊಡಬೇಕಾಗಿಲ್ಲ ಎಂದರು. ಇನ್ನು ಸಚಿವ ಸಂಪುಟ ಸಭೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಕೋವಿಡ್ ಮಾರ್ಗಸೂಚಿ ಬಗ್ಗೆ ಚರ್ಚೆ ಆಗಿದೆ. ಹಲವು ಸಂಘ ಸಂಸ್ಥೆಗಳು ಈ ಬಗ್ಗೆ ಅಭಿಪ್ರಾಯ ಹೇಳಿದ್ರು. ಆದರೆ ಸೋಂಕಿನ ರೂಪುರೇಷೆ ನೋಡಿ ಬಳಿಕ ತೀರ್ಮಾನ ಮಾಡೋಣ ಎಂದು ಚರ್ಚೆ ಆಗಿದೆ ಎಂದರು.