ಡಿನ್ನರ್ ಗೆ ಹೋಟೆಲ್ ಗೆ ಕರೆದುಕೊಂಡು ಹೋಗದಿದ್ದಕ್ಕೆ ಮಕ್ಕಳಿಗೆ ಬೆಂಕಿ ಹಚ್ಚಿ, ತಾಯಿ ಆತ್ಮಹತ್ಯೆ | ಜನತಾ ನ್ಯೂಸ್
ದೊಡ್ಡಬಳ್ಳಾಪುರ : ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಎಸ್.ಎಂ ಗೊಲ್ಲಹಳ್ಳಿಯಲ್ಲಿ ನಡೆದಿದೆ.
ಪತಿ ತನ್ನನ್ನು ವೀಕೆಂಡ್ ಡಿನ್ನರ್ ಗೆ ಹೋಟೆಲ್ ಗೆ ಕರೆದುಕೊಂಡು ಹೋಗದಿದ್ದಕ್ಕೆ ಆಕೆ ಮನನೊಂದಿದ್ದಳು. ಇದೇ ವಿಚಾರವಾಗಿ ದಂಪತನಿ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ.
ಮೃತ ಮಹಿಳೆಯನ್ನು ಸಂಧ್ಯಾ ಎಸ್ ಎಂದು ಗುರುತಿಸಲಾಗಿದೆ. ಆಕೆಯ ಮಗಳು ಕುಸುಮಾ (4) ಮಗ ರೋಹಿತ್ (2) ಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿ ಬಳಿಕ ತಾನೂ ಕೂಡಾ ಬೆಂಕಿ ಹಚ್ಚಿಕೊಂಡಿದ್ದಳು, ಇದನ್ನು ಕಂಡ ಗ್ರಾಮಸ್ಥರು ಬಾಗಿಲು ಒಡೆದು ಮೂವರನ್ನು ರಕ್ಷಿಸಿಲು ಯತ್ನಿಸಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಮೂವರು ಸಹ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಮೊಬೈಲ್ ಸರ್ವೀಸ್ ಸೆಂಟರ್ ಇಟ್ಟುಕೊಂಡಿರುವ ಶ್ರೀಕಾಂತ್ ಜೊತೆಗೆ ಕೆಲವು ವರ್ಷಗಳ ಹಿಂದೆ ಸಂಧ್ಯಾಳ ವಿವಾಹವಾಗಿತ್ತು. ಆಕೆ ಅನಾರೋಗ್ಯದಿಂದ ಬಳಲುತ್ತಿದ್ದಳು. ಇದರಿಂದ ಆಕೆ ಬೇಸತ್ತಿದ್ದಳು ಎಂದು ಸಹ ಹೇಳಲಾಗಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಮೃತಳ ತಂದೆ ನಾಗರಾಜು ದೂರು ನೀಡಿದ್ದಾರೆ.