ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು | ಜನತಾ ನ್ಯೂಸ್
ಬೆಂಗಳೂರು : ಮದುವೆಯ ಬಳಿಕವೂ ಸಂಬಂಧಿಯೊಂದಿಗೆ ಪ್ರೀತಿಯನ್ನು ಮುಂದುವರಿಸಿದ್ದ ಯುವತಿ, ಆತನೊಂದಿಗೆ ಮನೆ ಬಿಟ್ಟು ಬಂದಿದ್ದಲ್ಲದೆ, ನೇಣಿಗೆ ಶರಣಾದ ಘಟನೆ ದೇವನಹಳ್ಳಿ ಪಟ್ಟಣದ ಶಾಂತಿನಗರದ ಮನೆಯಲ್ಲಿ ನಡೆದಿದೆ.
ರಾಯಚೂರು ಮೂಲದ ಬಸವರಾಜ್ (28), ಜ್ಯೋತಿ (26) ಮೃತ ಪ್ರೇಮಿಗಳು.
ಜ್ಯೋತಿಗೆ ಮದುವೆ ಕೂಡ ಆಗಿತ್ತು. ಆದರೆ ಪ್ರಿಯಕರ ಜೊತೆ ಲವ್ವಿಡವ್ವಿ ಜೋರಾಗಿದ್ದ ಹಿನ್ನೆಲೆಯಲ್ಲಿ ಗಂಡನನ್ನ ಬಿಟ್ಟು ಬಂದಿದ್ದಳು ಎನ್ನಲಾಗಿದೆ. ಇವರು 20 ದಿನಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದು, ತಾವಿಬ್ಬರೂ ಗಂಡ-ಹೆಂಡತಿ ಎಂದು ಹೇಳಿ ದೇವನಹಳ್ಳಿಯ ಶಾಂತಿನಗರದಲ್ಲಿ ಮನೆ ಬಾಡಿಗೆಗೆ ಪಡೆದಿದ್ದರು.
ಆದರೆ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಿಂದ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು. ಪೊಲೀಸರು ಬಂದು ಬಾಗಿಲು ತೆರೆದು ನೋಡಿದಾಗ ಮನೆಯಲ್ಲಿ ಇಬ್ಬರ ಶವ ಪತ್ತೆಯಾಗಿದೆ.