ಪತ್ನಿಯ ಜತೆ ಮೊಬೈಲ್ನಲ್ಲಿ ಚಾಟ್ ಮಾಡ್ತಿದ್ದ ಯುವಕನ ಕೊಲೆಗೈದು ಮೃತದೇಹವನ್ನು ಸುಟ್ಟುಹಾಕಿದ ಪತಿ | ಜನತಾ ನ್ಯೂಸ್
ಚಿಕ್ಕಬಳ್ಳಾಪುರ : ತನ್ನ ಪತ್ನಿಯ ಜೊತೆ ವಾಟ್ಸ್ಆಯಪ್ನಲ್ಲಿ ಚಾಟಿಂಗ್ ಮಾಡುತ್ತಿದ್ದ ಎನ್ನುವ ಕಾರಣಕ್ಕೆ ಯುವಕನನ್ನು ಕೊಲೆ ಮಾಡಿ ಸುಟ್ಟು ಹಾಕಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಂಬಾಲಹಳ್ಳಿಯಲ್ಲಿ ನಡೆದಿದೆ.
ಶಂಕರ್(28) ಎಂಬಾತ ಕೊಲೆಯಾದ ಯುವಕ. ತನ್ನ ಪತ್ನಿಯ ಜತೆಯೇ ಸ್ನೇಹಿತ ಅನೈತಿಕ ಸಂಬಂಧ ಹೊಂದಿದ್ದ ಎಂದು ಶಂಕಿಸಿರುವ ಅಶೋಕ ಎಂಬಾತ ತನ್ನ ಇತರ ಸ್ನೇಹಿತರ ಜತೆಗೂಡಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಈ ಘಟನೆ ಗೌರಿಬಿದನೂರು ತಾಲ್ಲೂಕಿನ ಕಂಬಾಲಪಲ್ಲಿ ಗ್ರಾಮದ ನೀಲಗಿರಿ ತೋಪಿನ ಬಳಿ ನಡೆದಿದೆ. ಘಟನೆ ಸಂಬಂಧ ಮಂಚೇನಹಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :Murder in Chikkaballapura