ಶಿವಮೊಗ್ಗದಲ್ಲಿ ಹರ್ಷ ಕೊಲೆ ಮಾಡಿಸಿದ್ದೇ ಈಶ್ವರಪ್ಪ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ | ಜನತಾ ನ್ಯೂಸ್
ಬೆಂಗಳೂರು : ಶಿವಮೊಗ್ಗದಲ್ಲಿನ ಹರ್ಷ ಕೊಲೆಯ ಹಿಂದೆ ಬಿಜೆಪಿಯವರದ್ದೇ ಸಂಚಿದೆ. ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಮಾಡಿಸಿರೋದೆ ಈಶ್ವರಪ್ಪನವರೇ, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂಬುದಾಗಿ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.
ಪರಿಷತ್ ನಲ್ಲಿ ಇಂದು ಮಾತನಾಡಿದ ಅವರು, ಶಿವಮೊಗ್ಗ ಕೊಲೆ ಪ್ರಕರಣ ಸಂಬಂಧ ಮಾತನಾಡುತ್ತಾ ಪರೋಕ್ಷವಾಗಿ ಈಶ್ವರಪ್ಪನವರೇ ಈ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ತಮ್ಮ ಸ್ಥಾನ ಉಳಿಸಿಕೊಳ್ಳಲು ಈಶ್ವರಪ್ಪ ಕೊಲೆ ಮಾಡಿಸಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆ ಅಥವಾ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಮಾಡಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು. ಈ ಸಮಯದಲ್ಲಿ ಕಾಂಗ್ರೆಸ್ ನಾಯಕರು ಕೊಲೆಗಡುಕ ಈಶ್ವರಪ್ಪಂಗೆ ದಿಕ್ಕಾರ ಎಂದು ಘೋಷಣೆ ಕೂಗಿದರು.
ಭಜರಂಗದಳದಲ್ಲಿ ನನ್ನ ಮಗನಿಲ್ಲ ಎಂದು ಎರಡು ವರ್ಷಗಳ ಹಿಂದೆಯೇ ಮೃತನ ತಾಯಿ ಪೊಲೀಸ್ ವರಿಷ್ಟಾಧಿಕಾರಿಗೆ ಬರೆದು ಕೊಟ್ಟಿದ್ದಾರೆ. ಈ ಬಗ್ಗೆ ತನಿಖೆ ಆಗದೇ ಈಶ್ವರಪ್ಪ ಹೇಳಿಕೆ ಕೊಟ್ಟಿದ್ದಾರೆ. ತನಿಖೆ ನಡೆಯದೇ ಮೊದಲೇ ಈ ರೀತಿ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಹೀಗಾಗಿ ಈ ಬಗ್ಗೆ ಸವಿಸ್ತಾರವಾಗಿ ಅವರಿಗೆ ಗೊತ್ತಿದೆ, ಪರೋಕ್ಷವಾಗಿ ಈಶ್ವರಪ್ಪ ಅವರೇ ಕೊಲೆಗೆ ಕಾರಣ ಎಂದು ಬಿ.ಕೆ.ಹರಿಪ್ರಸಾದ್ ಗಂಭೀರ ಆರೋಪಗಳ್ನು ಮಾಡಿದರು.