Sun,May19,2024
ಕನ್ನಡ / English

ರಾಜಕಾರಣಿಗಳು ಮೂರು ದಿನ ಹೋದ ಪ್ರಾಣದ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸಿ, ಹತ್ತು ಲಕ್ಷ ಪರಿಹಾರ ಕೊಟ್ಟರೆ ಸಾಕೇ?: ಹೆಚ್ ಡಿ ಕುಮಾರಸ್ವಾಮಿ | ಜನತಾ ನ್ಯೂಸ್

21 Feb 2022
2102

ಬೆಂಗಳೂರು : ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಯುವಕನ ಕೊಲೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ ಅಮಾನವೀಯ. ಆ ಯುವಕನ ಕುಟುಂಬಕ್ಕೆ ನನ್ನ ಸಾಂತ್ವನಗಳು. ಈ ಕೊಲೆಯ ಹಿಂದೆ ಯಾರೇ ಇದ್ದರೂ ಅವರನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಇಂಥ ಘಟನೆಗಳು ಪದೇ ಪದೆ ನಡೆಯುತ್ತವೆ. ಶಾಂತಿಯನ್ನು ಕದಡುವುದೇ ಅವರ ಕೆಲಸ, ಇಂಥ ಘಟನೆಗಳ ಬೆಂಕಿಯಲ್ಲಿ ರಾಷ್ಟ್ರೀಯ ಪಕ್ಷಗಳು ಚಳಿ ಕಾಯಿಸಿಕೊಳ್ಳುತ್ತವೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ರಾಜ್ಯದಲ್ಲಿ ಅಂತವೇ ಕೆಟ್ಟ, ಭಯಾನಕ ಘಟನೆಗಳು ನಡೆಯುತ್ತಿವೆ.

ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಇಂಥ ಘಟನೆಗಳು ನಡೆಯುತ್ತಿವೆ ಎನ್ನುವುದು ನನ್ನ ಅನುಮಾನ. ರಾಷ್ಟ್ರೀಯ ಪಕ್ಷಗಳಿಗೆ ಅಭಿವೃದ್ಧಿ ವಿಚಾರ ಇಟ್ಟುಕೊಂಡು ಜನರ ಬಳಿಗೆ ಹೋಗಲು ವಿಷಯ ಇಲ್ಲ. ಕೇವಲ ಭಾವನಾತ್ಮಕ ಅಂಶಗಳ ಮೂಲಕ "ಹಿಂಸಾ ರಾಜಕಾರಣ"ವನ್ನು ಮಾಡಲು ಎರಡೂ ಪಕ್ಷಗಳು ಹೊರಟಿವೆ ಎಂದು ಟೀಕಿಸಿದ್ದಾರೆ.

ಹತ್ಯೆಗೀಡಾದ ಯುವಕನಿಗೆ ಮೊದಲೇ ಜೀವ ಬೆದರಿಕೆ ಇತ್ತೆಂದು, ಪೊಲೀಸರಿಗೆ ದೂರು ಕೊಡಲಾಗಿತ್ತು ಎಂದು ಹೇಳುತ್ತಿದ್ದಾರೆ. ಹಾಗಾದರೆ ಆ ಯುವಕನಿಗೆ ರಕ್ಷಣೆ ಯಾಕೆ ಕೊಡಲಿಲ್ಲ. ಇದಕ್ಕೆ ಉತ್ತರ ಬೇಕಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳು 2023ರ ಚುನಾವಣೆಗೆ ಸದನದಲ್ಲಿ ಗದ್ದಲ ಎಬ್ಬಿಸುವ ಮೂಲಕ ಟ್ರೈಲರ್ ಬಿಟ್ಟಿದ್ದು, ಸಿನಿಮಾ ಬಾಕಿ ಇದೆ ಎಂದಿದ್ದೆ ಎಂದು ಟೀಕಿಸಿದ್ದಾರೆ.

ಶಿವಮೊಗ್ಗ ಘಟನೆಯ ಮೂಲಕ ರಾಷ್ಟ್ರೀಯ ಪಕ್ಷಗಳು ಹಿಂಸಾ ರಾಜಕಾರಣದ ಪೂರ್ಣ ಸಿನಿಮಾ ತೋರಿಸಲು ಹೊರಟಿದ್ದಾರೆ. ಜನರ ಸೂಕ್ಷ್ಮ ಭಾವನೆಗಳು ಹಾಗೂ ಸಮಾಜದ ಶಾಂತಿಯನ್ನು ಅಪಾಯಕ್ಕೆ ಒಡ್ಡಿ ಬೇಳೆ ಬೇಯಿಸಿಕೊಳ್ಳುತ್ತಿರುವ ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣಕ್ಕೆ ಕ್ಷಮೆಯೇ ಇಲ್ಲ.

ಈಗ ಒಂದು ಅಮೂಲ್ಯ ಪ್ರಾಣ ಹೋಗಿದೆ. ಅದಕ್ಕೆ ಯಾರು ಹೊಣೆ? ರಾಜಕಾರಣಿಗಳು ಮೂರು ದಿನ ಹೋದ ಪ್ರಾಣದ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸಿ, ಹತ್ತು ಲಕ್ಷ ಪರಿಹಾರ ಕೊಟ್ಟರೆ ಸಾಕೇ?. ಇಂತಹ ಹಿಂಸಾ ಪ್ರವೃತ್ತಿಗೆ ಕೊನೆ ಎಂದು? ಎಂದು ಪ್ರಶ್ನಿಸಿದ್ದಾರೆ.

RELATED TOPICS:
English summary :National Parties Go to Politics of Violence: H D Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...