ಮೇಲಧಿಕಾರಿಗಳ ಕಿರುಕುಳ: ಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಜನತಾ ನ್ಯೂಸ್
ಕಲಬುರಗಿ : ಮೇಲಧಿಕಾರಿಗಳ ವರ್ತನೆಯಿಂದ ಬೇಸತ್ತು ಸಿಬ್ಬಂದಿಯೊಬ್ಬ ಡೆತ್ ನೋಟ್ ಬರೆದಿಟ್ಟು, ಲೈವ್ ವೀಡಿಯೋ ಮಾಡಿ, ಕಚೇರಿಯ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಕಿನಾರಾ ಕ್ಯಾಪಿಟಲ್ನ ಕಲಬುರಗಿ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಕೃಷ್ಣಕಾಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೆಲ ದಿನಗಳ ಹಿಂದೆ ಕೃಷ್ಣಕಾಂತ್ನನ್ನು ಕೆಲಸದಿಂದ ತಗೆಯಲಾಗಿತ್ತು. ವಿನಾಕಾರಣ ಬ್ಯಾಂಕ್ ಮ್ಯಾನೇಜರ್ ಕಿರುಕುಳ ನೀಡಿದ್ದಾರೆ. ನನ್ನನ್ನು ಉದ್ದೇಶಪೂರ್ವಕವಾಗಿ ಕೆಲಸದಿಂದ ತೆಗೆದಿದ್ದಾರೆ, ಈ ಬಗ್ಗೆ ಪ್ರಶ್ನಿಸಿದ್ರೆ ಅಪಹಾಸ್ಯ ಮಾಡಿ ಅವ್ಯಾಚ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ತೊಂದರೆ ಕೊಟ್ಟಿದ್ದಾರೆ ಎಂದು ಆರೋಪಿಸಿ ಕಚೇರಿ ಮುಂದೆ ವಿಷ ಸೇವಿಸಿ ಕೃಷ್ಣಕಾಂತ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಈ ಸಂಬಂಧ ಮಹಾತ್ಮ ಬಸವೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.