ಪೊಲೀಸ್ ಎಂದು ಹೇಳಿ ವ್ಯಾಪಾರಸ್ಥರಿಂದ ಹಣ ವಸೂಲಿ ಮಾಡುತ್ತಿದ್ದ ಟೀ ಮಾರಾಟಗಾರ ಅರೆಸ್ಟ್ | ಜನತಾ ನ್ಯೂಸ್
ಬೆಂಗಳೂರು : ಪೊಲೀಸ್ ಎಂದು ಹೇಳಿಕೊಂಡು ವರ್ತಕರಿಂದ ಹಣವಸೂಲಿ ಮಾಡುತ್ತಿದ್ದ ಟೀ ಮಾರಾಟಗಾರನನ್ನು ಸಿಟಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.
ಶ್ರೀರಾಮಪುರದ ವಿಘ್ನೇಶ್ (23) ಬಂಧಿತ ಆರೋಪಿಯಾಗಿದ್ದು, ಈತ ಬೆಳಗಿನ ವೇಳೆಯಲ್ಲಿ ಚಿಕ್ಕಪೇಟೆ, ಕಾಟನ್ ಪೇಟೆ, ಹಲಸೂರು ಪ್ರಧೇಶಗಳಲ್ಲಿ ಟೀ ಮಾರಾಟ ಮಾಡುತ್ತಿದ್ದ.
ಆ ವೇಳೆ ಅಂಗಡಿಗಳ ಮಾಹಿತಿ ಪಡೆದುಕೊಂಡಿದ್ದ ಆರೋಪಿ ಮಧ್ಯಾಹ್ನ ಆಗುತ್ತಿದಂತೆ ಅಂಗಡಿಗಳ ಬಳಿ ಬಂದು ವ್ಯಾಪಾರಸ್ಥರನ್ನು ಬೆದರಿಸಿ, ನೀವು ಅಕ್ರಮವಾಗಿ ತಂಬಾಕು ಮಾರಾಟ ಮಾಡುತ್ತಿದ್ದೀರಿ. ನಾನು ಕಮಿಷನರ್ ಆಫೀಸ್ ಸಿಬ್ಬಂದಿ ಎಂದು ಹಣವಸೂಲಿ ಮಾಡುತ್ತಿದ್ದನಂತೆ.
ಸಾರ್ವಜನಿಕರಿಂದ ಹಣವಸೂಲಿ ಮಾಡ್ತಿದ್ದ ಘಟನೆ ಕುರಿತಂತೆ ಪ್ರಕರಣ ದಾಖಲಾಗುತ್ತಿದಂತೆ ಕೆಆರ್ಮಾರ್ಕೆಟ್ ಪೊಲೀಸರು ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.