ಉಕ್ರೇನ್ನಿಂದ ಬಂದ ಕರ್ನಾಟಕ ವಿದ್ಯಾರ್ಥಿಗಳ ಭವಿಷ್ಯ ಏನು? | ಜನತಾ ನ್ಯೂಸ್
ಬೆಂಗಳೂರು : ಉಕ್ರೇನ್ನಿಂದ ಬಂದ ಕರ್ನಾಟಕ ವಿದ್ಯಾರ್ಥಿಗಳ ಭವಿಷ್ಯ ಏನು? ವಿಧಾನಸಭೆಯಲ್ಲಿ ಯುಟಿ ಖಾದರ್ ಪ್ರಸ್ತಾಪಿಸಿದ್ದಾರೆ.
ಉಕ್ರೇನ್ನಲ್ಲಿ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ನನ್ನು ಕಳೆದುಕೊಂಡಿದ್ದೇವೆ. ಉಕ್ರೇನ್ನಿಂದ ಬಂದ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯದ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಖಾದರ್ ಆಗ್ರಹಿಸಿದರು.
1,000 ರ್ಯಾಂಕ್ ಗಳಲ್ಲಿ 50 ವಿದ್ಯಾರ್ಥಿಗಳು ಕೂಡಾ ನಮ್ಮ ರಾಜ್ಯದವರಲ್ಲ. ನಮ್ಮ ವಿದ್ಯಾರ್ಥಿಗಳಲ್ಲಿ ಇಷ್ಟು ಟ್ಯಾಲೆಂಟ್ ಇದ್ದರೂ ಏಕೆ ಸಿಗುತ್ತಿಲ್ಲ ಎಂದು ಖಾದರ್ ಪ್ರಶ್ನಿಸಿದರು, ಶ್ರೀಮಂತರ ಮಕ್ಕಳು ಎರಡು ವರ್ಷ ನೀಟ್ಗೆ ಗಮನ ಕೊಡುತ್ತಾರೆ ವಿನಃ ಪಿಯುಸಿ ಕಲಿಯುವುದಿಲ್ಲ. ಮುಂದಿನ ದಿನಗಳಲ್ಲಿ ಶೇ.50 ಪಿಯುಸಿ ಹಾಗೂ ಶೇ.50 ನೀಟ್ ಪರಿಗಣಿಸ ಬೇಕು. ಈ ಬಗ್ಗೆ ಉನ್ನತ ಮಟ್ಟದ ಚರ್ಚೆ ಆಗಬೇಕು ಎಂದು ಖಾದರ್ ಆಗ್ರಹಿಸಿದರು.
ಶ್ರೀಮಂತರ ಮಕ್ಕಳು ಎರಡು ವರ್ಷ ನೀಟ್ಗೆ ಗಮನ ಕೊಡುತ್ತಾರೆ ವಿನಃ ಪಿಯುಸಿ ಕಲಿಯುವುದಿಲ್ಲ. ಮುಂದಿನ ದಿನಗಳಲ್ಲಿ ಶೇ.50 ಪಿಯುಸಿ ಹಾಗೂ ಶೇ.50 ನೀಟ್ ಪರಿಗಣಿಸಿದರೆ ಒಳ್ಳೆಯದು. ಈ ಬಗ್ಗೆ ಉನ್ನತ ಮಟ್ಟದ ಚರ್ಚೆ ಆಗಬೇಕು ಎಂದು ಖಾದರ್ ಆಗ್ರಹಿಸಿದರು.