ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಕಾರ್ಮಿಕ ಸಾವು! | ಜನತಾ ನ್ಯೂಸ್
ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಕಾರ್ಮಿಕ ಸಾವನಪ್ಪಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯ ನಾಗರಭಾವಿಯಲ್ಲಿ ನಡೆದಿದೆ.
ತಮಿಳುನಾಡು ಮೂಲದ ಏಳುಮಲೈ (47) ಮೃತ ಪಟ್ಟ ಕಾರ್ಮಿಕ. ರಾತ್ರಿ 7 ಗಂಟೆಗೆ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಮೆಟ್ಟಿಲ ಬಳಸಿ ಇಳಿಯುತ್ತಿದ್ದಾಗ ಕಾಲು ಜಾರಿ ಕೆಳಗೆ ಕೆಳಗೆಬಿದ್ದು ಗಂಭೀರವಾಗಿ ಗಾಯಗೊಂಡಿದ್ದ.. ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ.
ಕಟ್ಟಡ ಮಾಲೀಕ ಮುನಿರಾಜು ಬಾಬು, ಶಿವಶಂಕರ್ ಚೌಧರಿ, ಗುತ್ತಿಗೆದಾರರಾದ ಶಕ್ತಿವೇಲು, ವಾದಿವೇಲು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
English summary :Labor deaths that fell from a construction site