Sat,Jun20,2026
ಕನ್ನಡ / English

ಅರ್ಧದಲ್ಲೇ ನಿಂತ ಪ್ಯಾಸೆಂಜರ್ ಟ್ರೈನ್, ಹಳಿ ಮೇಲೆ ನಿಂತಿದ್ದ ಮೈಮೇಲೆ ಹರಿದ ಎಕ್ಸ್​ಪ್ರೆಸ್​ ರೈಲು! | ಜನತಾ ನ್ಯೂಸ್

09 Mar 2022

ಕೋಲಾರ : ಪ್ಯಾಸೆಂಜರ್​ ರೈಲಿಂದ ಇಳಿದು ಹಳಿ ಮೇಲೆ ಕುಳಿತಿದ್ದ ಪ್ರಯಾಣಿಕನ ಮೇಲೆ ಹರಿದು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಪ್ರಯಾಣಿಕರನ್ನು ತುಂಬಿಕೊಂಡು ಮಾರಿಕುಪ್ಪಂನಿಂದ ಬೆಂಗಳೂರಿನ ಕಡೆಗೆ ಹೊರಟಿದ್ದ ಸ್ವರ್ಣ ಟ್ರೈನ್, ಸಿಗ್ನಲ್ ಸಮಸ್ಯೆಯಿಂದ ಟೇಕಲ್ ಸ್ಟೇಷನ್​ನಲ್ಲಿ ಟ್ರ್ಯಾಕ್ ಮೇಲೆಯೇ ನಿಂತಿತ್ತು. ಈ ವೇಳೆ ಮೈಸೂರಿನಿಂದ ಚೆನ್ನೈ ಕಡೆಗೆ ಎಕ್ಸ್‌ಪ್ರೆಸ್‌ ರೈಲು ಹೋಗುತ್ತಿತ್ತು. ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ರೈಲಿನಿಂದ ಪ್ರಯಾಣಿಕರು ಇಳಿಯುತ್ತಿದ್ದರು.

ಅದೇ ಸಂದರ್ಭದಲ್ಲಿ ಎಕ್ಸ್‌ಪ್ರೆಸ್ ರೈಲಿಗೆ ರೈಲ್ವೆ ಅಧಿಕಾರಿಗಳು ಸಿಗ್ನಲ್ ನೀಡಿದ್ದು, ಈ ವೇಳೆ ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್‌ ರೈಲು ವೇಗವಾಗಿ ನುಗ್ಗಿ ಬಂದಿದ್ದು, ಪ್ರಯಾಣಿಕರು ಬಚಾವ್​ ಆಗಲು ಯತ್ನಿಸುವ ವೇಳೆಗೆ ಡಿಕ್ಕಿ ಹೊಡೆದಿದೆ.

ಜನ ರೈಲು ಹಳಿಗಳ ಮೇಲೆ ನಿಂತಿರುವುದನ್ನು ಗಮನಿಸಿದ ಲೋಕೋ ಪೈಲಟ್ ಸತತವಾಗಿ ಹಾರ್ನ್ ಮಾಡಿದ್ದಾರೆ. ಈ ವೇಳೆ ಹಲವರು ಹಳಿಯಿಂದ ಪಕ್ಕಕ್ಕೆ ಸರಿದಿದ್ದಾರೆ. ಪ್ರಯಾಣಿಕರ ಮೇಲೆ ಎಕ್ಸ್​ಪ್ರೆಸ್​ ರೈಲು ಹರಿದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದಾರೆ.

ಮೃತನನ್ನು 24 ವರ್ಷದ ಕಾಲ್ ಸೆಂಟರ್ ಉದ್ಯೋಗಿ ಶಾಬಾಜ್ ಅಹ್ಮದ್ ಷರೀಫ್ ಎಂದು ಗುರುತಿಸಲಾಗಿದ್ದು, ಈತ ಬಂಗಾರಪೇಟೆ ನಿವಾಸಿ ಎನ್ನಲಾಗಿದೆ. ಶಬಾಜ್ ಅಹ್ಮದ್ ಷರೀಫ್ ಬೆಂಗಳೂರಿನ ರಾಜಾಜಿನಗರದಲ್ಲಿರುವ ವಿಂಧ್ಯಾ ಇನ್ಫೋಟೆಕ್ ಸಲ್ಯೂಷನ್ಸ್‌ನಲ್ಲಿ ಉದ್ಯೋಗಿಯಾಗಿದ್ದರು ಎನ್ನಲಾಗಿದೆ.

ಈ ದುರಂತಕ್ಕೆ ಸ್ಟೇಷನ್ ಮಾಸ್ಟರ್​ನ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಮತ್ತು ಇತರ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

RELATED TOPICS:
English summary :Accident by train

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...