ವೇಶ್ಯಾವಾಟಿಕೆ ದಂಧೆ: ಮೂವರ ಬಂಧನ! | ಜನತಾ ನ್ಯೂಸ್

ಬೆಂಗಳೂರು : ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವೇಶ್ಯಾವಾಟಿಕೆ ನಡೆಸುತ್ತಿದ್ದ ಸಿ.ಆರ್.ಮಧು (43), ವೇಶ್ಯಾವಾಟಿಕೆಗೆ ಮಹಿಳೆಯರನ್ನು ಪೂರೈಸುತ್ತಿದ್ದ ರಫಿಕುಲ್ ಇಸ್ಲಾಂ (21), ರುಬೇಲ್ ಮಂಡಲ್ (28)ಎನ್ನುವವರನ್ನು ಬಂಧಿಸಲಾಗಿದೆ.
ಯಲಹಂಕ ಬಳಿಯ ವಿದ್ಯಾರಣ್ಯಪುರದ ಜಯಕೃಷ್ಣ ಬಡಾವಣೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿದ್ಯಾರಣ್ಯಪುರ ಪೊಲೀಸರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ರಫಿಕುಲ್ ಮತ್ತು ರುಬೇಲ್ ಮಂಡಲ್ ಮಧುಗೆ ಮಹಿಳೆಯರನ್ನು ಪೂರೈಸುತ್ತಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಆರೋಪಿಗಳು ಪಶ್ಚಿಮ ಬಂಗಾಳ, ಅಸ್ಸೋಂ ರಾಜ್ಯಗಳಿಂದ ಮಹಿಳೆಯರನ್ನು ಕರೆ ತಂದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.