ಹಾಸನದಲ್ಲಿ ಕಾಡಾನೆ ದಾಳಿ, ಇಬ್ಬರು ಬಲಿ | ಜನತಾ ನ್ಯೂಸ್
ಹಾಸನ : ಕಾಡಾನೆ ದಾಳಿಗೆ ಕಾಫಿ ತೋಟದ ಇಬ್ಬರು ಕೆಲಸಗಾರರು ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಇನ ಕಡೆಗರ್ಜೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಯ್ಯ (60), ಚಿಕ್ಕಯ್ಯ (50) ಮೃತಪಟ್ಟವರು. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಏಕಾಏಕಿ ತೋಟಕ್ಕೆ ಆನೆಗಳು ನುಗ್ಗಿದ್ದು, ಸೊಂಡಲಿನಿಂದ ತಿವಿದು ಬಡಿದು, ಇಬ್ಬರನ್ನು ತುಳಿದು ಹಾಕಿದೆ. ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಜನರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆಯಲ್ಲಿ ಬೆಂಕಿ ಹಾಕಿ ರಸ್ತೆ ತಡೆ ಮಾಡಿದ್ದಾರೆ. ಸ್ಥಳಕ್ಕೆ ಶಾಸಕರು, ಡಿಎಫ್ಓ ಬರುವಂತೆ ಒತ್ತಾಯ ಮಾಡುತ್ತಿದ್ದಾರೆ.
ಮೃತಪಟ್ಟ ಕಾರ್ಮಿಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅರೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
English summary :Elephant attacked in Hassan, two people died