ರಾಡ್ನಿಂದ ಹೊಡೆದು ಪತ್ನಿಯನ್ನು ಸಾಯಿಸಿ ಪತಿ ಆತ್ಮಹತ್ಯೆ! | ಜನತಾ ನ್ಯೂಸ್
ಧಾರವಾಡ : ರಾಡ್ನಿಂದ ಹೊಡೆದು ಪತ್ನಿಯನ್ನು ಕೊಂದು ಬಳಿಕ ಗಂಡನೂ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಧಾರವಾಡ ಹೊರವಲಯದ ಗಣೇಶನಗರದ ಗಳವಿ ದಡ್ಡಿಯಲ್ಲಿ ಸಂಭವಿಸಿದೆ.
ಚಟ್ಟು ತನ್ನ ಪತ್ನಿ ಮನಿಷಾಳನ್ನು ಹತ್ಯೆಗೈದು ನೇಣಿಗೆ ಶರಣಾಗಿದ್ದಾನೆ. ಇವರಿಬ್ಬರೂ ಕೆಲಸಕ್ಕೆಂದು ಗೋವಾಗೆ ಹೋಗಿದ್ದರು. ನಾಲ್ಕು ದಿನದ ಹಿಂದಷ್ಟೇ ಪತಿ-ಪತ್ನಿ ಇಬ್ಬರೂ ಗೋವಾದಿಂದ ವಾಪಸ್ ಊರಿಗೆ ಬಂದಿದ್ದರು.
ರಾತ್ರಿ ಕುಡಿದು ಪತ್ನಿಯ ಜೊತೆ ಜಗಳ ಮಾಡಿದ ಚಟ್ಟು, ಪತ್ನಿ ಮಲಗಿದ್ದಾಗ ಕಬ್ಬಿಣದ ರಾಡ್ನಿಂದ ಹೊಡೆದು ಕೊಲೆ ಮಾಡಿ, ನಂತರ ತಾನು ಕೂಡ ನೇಣು ಹಾಕಿಕೊಂಡಿದ್ದಾನೆ.
ಉಪನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
RELATED TOPICS:
English summary :Wife murder in Dharwad