ಪಾವಗಡ ಬಸ್ ದುರಂತ: ಸಾರಿಗೆ ಇಲಾಖೆಯ ಕರ್ತವ್ಯಲೋಪ ಮತ್ತು ದಿವ್ಯ ನಿರ್ಲಕ್ಷ್ಯವೇ ಕಾರಣ! | JANATA NEWS
ಬೆಂಗಳೂರು : ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಅಸುನೀಗಿದವರಿಗೆ ರಾಜ್ಯ ಸರಕಾರ ಕನಿಷ್ಠ 25 ಲಕ್ಷ ರೂ.
ಪರಿಹಾರ ನೀಡಬೇಕು. 5 ಲಕ್ಷ ರೂ. ಕೊಟ್ಟು ಕೈತೊಳೆದುಕೊಳ್ಳುವುದು ಸರಿಯಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.
ತುಮಕೂರಿನ ಪಾವಗಡದಲ್ಲಿ ನಡೆದ ಬಸ್ ದುರಂತಕ್ಕೆ ಸಾರಿಗೆ ಇಲಾಖೆಯ ಕರ್ತವ್ಯಲೋಪ ಮತ್ತು ದಿವ್ಯ ನಿರ್ಲಕ್ಷ್ಯವೇ ಕಾರಣ ಎಂದು ಕುಮಾರಸ್ವಾಮಿ ಆರೋಪಿಸಿದ್ದರೆ. ಇನ್ನು ಅಪಘಾತದಲ್ಲಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಎಷ್ಟೋ ಕನಸ್ಸುಗಳನ್ನು ಕಟ್ಟಿಕೊಂಡಿದ್ದ ವಿದ್ಯಾರ್ಥಿಗಳ ಜೀವ ಬಲಿಯಾಗಿವೆ. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ದೊಡ್ಡ ಮೊತ್ತದ ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಆಗ್ರಹಿಸಿದ್ದಾರೆ
ಅಪಘಾತದಲ್ಲಿ ಗಾಯಗೊಂಡವರನ್ನು ತುಮಕೂರು ಆಸ್ಪತ್ರೆ ಹಾಗೂ ಗಂಭೀರ ಸ್ಥಿತಿಯಲ್ಲಿರೋರನ್ನು ಬೆಂಗಳೂರು ಆಸ್ಪತ್ರೆ ಗಳಿಗೆ ದಾಖಲಿಸಲಾಗಿದೆ. ಅಲ್ಲಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಗಳು ಸಿಗುತ್ತಿಲ್ಲ ಎಂಬ ವರದಿಗಳು ಬರ್ತಿವೆ. ಈ ಬಗ್ಗೆ ಸರ್ಕಾರ ಕೂಡಲೇ ಗಮನ ಹರಿಸಬೇಕು, ಓರ್ವ ಉಸ್ತುವಾರಿ ಅಧಿಕಾರಿ ನಿಯೋಜಿಸಬೇಕು ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಎಲ್ಲರಿಗೂ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ಕೊಡಿಸಬೇಕು
ಗಾಯಾಳುಗಳನ್ನು ಬೆಂಗಳೂರು, ತುಮಕೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಿಗೆ ಅಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ವರದಿಗಳು ಬೆಳಗ್ಗೆಯಿಂದಲೂ ಮಾಧ್ಯಮಗಳಲ್ಲಿ ಬರುತ್ತಿವೆ. ಸರಕಾರ ಕೂಡಲೇ ತುರ್ತು ಗಮನ ಹರಿಸಿ, ಓರ್ವ ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಬೇಕು. ಎಲ್ಲರಿಗೂ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ಕೊಡಿಸಬೇಕು ಎಂದು ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬಸ್ಸಿನೊಳಗೆ ಪ್ರಯಾಣಿಕರು ಕಿಕ್ಕಿರಿದು ತುಂಬಿದ್ದರು. ಟಾಪ್ ತುಂಬಾ ಜನ ಕೂತಿದ್ದರು. ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಜನ ಹೆಚ್ಚಿದ್ದರೂ ಈ ಮಾರ್ಗದಲ್ಲಿ ಬಸ್ಗಳ ಸಂಚಾರ ಸರಿಯಾಗಿಲ್ಲ, ಏಕೆ? ಅಧಿಕಾರಿಗಳ ಉಪೇಕ್ಷೆ ಖಂಡನೀಯ ಎಂದು ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.