ಮೇಕೆದಾಟು ವಿವಾದ: ತಮಿಳುನಾಡು ಸರ್ಕಾರಕ್ಕೆ ನಾಳೆ ರಾಜ್ಯದಿಂದ ಕೌಂಟರ್ | JANATA NEWS
ಬೆಂಗಳೂರು : ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯ ಖಂಡಿಸಿ ಪ್ರತಿ ನಿರ್ಣಯ ಮಾಡಲು ರಾಜ್ಯ ಸರ್ಕಾರ ರೆಡಿಯಾಗಿದೆ. ನಾಳೆ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯ ಖಂಡಿಸಿ ಬುಧವಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲಾಗುವುದು. ತಮಿಳುನಾಡು ನಿರ್ಣಯ ಕಾನೂನು ಬಾಹಿರ. ನಮ್ಮ ಈ ನಿಲುವು ಸ್ಪಷ್ಟವಾಗಿದೆ. ಬುಧವಾರ ನಿರ್ಣಯ ತರುತ್ತೇವೆ, ಮೇಕೆದಾಟು ಯೋಜನೆಗಾಗಿ ತಮಿಳುನಾಡಿಗೆ ಸೂಕ್ತ ಪ್ರತ್ಯುತ್ತರ ನೀಡಲು ನಾಳೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ ಮಾಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಮ್ಮ ಪ್ರದೇಶದಲ್ಲಿ, ನಮ್ಮ ನೀರಿನಲ್ಲಿ ನಾವು ಈ ಯೋಜನೆ ಮಾಡಲು ಹೊರಟಿದ್ದೇವೆ. ಇದರಿಂದ ತಮಿಳುನಾಡಿಗೆ ಯಾವುದೇ ತೊಂದರೆ ಇಲ್ಲ. ಇದರಿಂದ ಟ್ರಿಬ್ಯುನಲ್ ಆದೇಶ ಎಲ್ಲೂ ಉಲ್ಲಂಘನೆ ಆಗಲ್ಲ ಎಂದರು. ತಮಿಳುನಾಡಿಗೆ ಹೋಗುವ ಹೆಚ್ಚುವರಿ ನೀರನ್ನ ಬಳಕೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಇಷ್ಟಾದರೂ ಯೋಜನೆಗೆ ಅಡ್ಡಗಾಲು ಹಾಕುವ ಪ್ರಯತ್ನ ನಡೆಯುತ್ತಿದೆ
ಎರಡನೇ ಹಂತದ ಯೋಜನೆ ಮಾತಾಡ್ತಿದೆ. ಇದನ್ನು ನಾವು ಪ್ರಶ್ನಿಸಿದ್ದೇವೆ. ನಮಗೆ ತಮಿಳುನಾಡು ಪದೇ ಪದೇ ಅಡ್ಡಗಾಲು ಹಾಕ್ತಿದೆ ಎಂದರು. ಹಿಂದೆ ಹೀಗೆ ಕಾವೇರಿ ಯೋಜನೆಗೆ ಅಡ್ಡಿ ಮಾಡಿದ್ರು. ಆಗ ಅವರು ಹೊಗೇನಕಲ್ ಪ್ರಪೋಸ್ ಮಾಡಿದಾಗ ನಾವು ಕಾವೇರಿ ಯೋಜನೆ ಪ್ರಪೋಸ್ ಮಾಡಿದಾಗ ಅದು ಇತ್ಯರ್ಥ ಆಗಿತ್ತು ಎಂದು ಹೇಳಿದರು.
ನಾವು ಕಾವೇರಿ ನೀರನ್ನು ಬಳಕೆ ಮಾಡುವ ಎಲ್ಲ ಸಂದರ್ಭದಲ್ಲಿ ತಮಿಳುನಾಡಿನಿಂದ ಅಡ್ಡಿಯಾಗುತ್ತಿದೆ. ನಮ್ಮ ನೀರಿನ ಹಕ್ಕು ಪಡೆದುಕೊಳ್ಳಲು ನಾವು ಪರಿತಪಿಸುವುದು ರಾಜ್ಯದ ಹಿತ ದೃಷ್ಟಿಯಿಂದ ಸರಿಯಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.