ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಜಾರಿ ಇಲ್ಲ: ಸುನಿಲ್ ಕುಮಾರ್ | JANATA NEWS
ಬೆಂಗಳೂರು : ರಾಜ್ಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಜಾರಿ ಮಾಡುವುದಿಲ್ಲ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಸ್ಥಿತಿ ಎದುರಾಗಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ಕಾಂಗ್ರೆಸ್ನ ಹರೀಶ್ ಕುಮಾರ್ ವಿಷಯ ಪ್ರಸ್ತಾಪ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಸದ್ಯಕ್ಕೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ. ರಾಜ್ಯದಲ್ಲಿ ಕಲ್ಲಿದ್ದಲ ಸಮಸ್ಯೆ ಇಲ್ಲ. ಪ್ರಾರಂಭದಲ್ಲಿ ಸ್ವಲ್ಪ ಕಲ್ಲಿದ್ದಲಿನ ಸಮಸ್ಯೆ ಆಗಿತ್ತು. ಆದರೆ ಕೂಡಲೇ ಕೇಂದ್ರ ಸಚಿವರ ಭೇಟಿಯಾಗಿ ರಾಜ್ಯದ ಪಾಲಿನ ಕಲ್ಲಿದ್ದಲು ಪಡೆಯಲು ಕ್ರಮವಹಿಸುವ ಕೆಲಸ ಆಗಿದೆ.
ಸಿಎಂ ಕೂಡಾ ಉತ್ತಮವಾಗಿ ಈ ವಿಚಾರವಾಗಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಹೀಗಾಗಿ ನಮಗೆ ಸದ್ಯ ಕಲ್ಲಿದ್ದಲಿನ ಕೊರತೆ ಇಲ್ಲ. ಹೀಗಾಗಿ ಸದ್ಯಕ್ಕೆ ರಾಜ್ಯದಲ್ಲಿ ಕೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ರೈತರಿಗೆ 7 ಗಂಟೆ ವಿದ್ಯುತ್ ಕೊಡಲಾಗುತ್ತಿದೆ. ಎಲ್ಲಾದರೂ ಸಮಸ್ಯೆ ಆಗಿದೆ ಎಂದು ತಿಳಿಸಿದರೆ ಅಲ್ಲಿ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಭರವಸೆ ನೀಡಿದರು.