ಬಟ್ಟೆ ಬ್ಯಾಗ್ ಖರೀದಿ ಹಗರಣದ ಬಗ್ಗೆ ತನಿಖೆಗೆ ಆದೇಶ: ರೋಹಿಣಿ ಸಿಂಧೂರಿಗೆ ಸಂಕಷ್ಟ | JANATA NEWS
ಮೈಸೂರು : ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ಸರ್ಕಾರ ಆದೇಶಿಸಿದೆ.
ಮೈಸೂರಿನಲ್ಲಿ ಸೆಪ್ಟೆಂಬರ್ 3, 2021ರಂದು ಸುದ್ಧಿಗೋಷ್ಠಿ ನಡೆಸಿದ್ದಂತ ಶಾಸಕ ಸಾರಾ ಮಹೇಶ್ ಅವರು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಏಕ ಪಕ್ಷೀಯವಾಗಿ ಬಟ್ಟೆ ಬ್ಯಾಗ್ ಖರೀದಿಸಿದ್ದಾರೆ. ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಯೋಜನೆ ನೆಪದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅಕ್ರಮವೆಸಗಿದ್ದಾರೆ ಎಂಬುದಾಗಿ ಗಂಭೀರ ಆರೋಪ ಮಾಡಿ, ದಾಖಲೆಗಳನ್ನು ಕೂಡ ಪ್ರದರ್ಶಿಸಿದ್ದರು.
ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ಸರ್ಕಾರ ಆದೇಶಿಸಿದೆ. ನಗರಸಭೆ, ಪುರಸಭೆ ಮತ್ತು ಮಹಾನಗರಪಾಲಿಕೆಗಳ ಪೂರ್ವಾನುಮತಿಯಿಲ್ಲದೆ ದುಬಾರಿ ಬೆಲೆಗೆ ಬ್ಯಾಗ್ಗಳನ್ನು ಖರೀದಿಸಲಾಗಿತ್ತು ಎಂದು ಮಹೇಶ್ ದೂರಿದ್ದರು. ಚಿಲ್ಲರೆ ಮಾರುಕಟ್ಟೆಯಲ್ಲಿ ₹ 9 ರಿಂದ 19 ರೂಪಾಯಿಗೆ ಸಿಗೋ ಬ್ಯಾಗ್ ಗಳನ್ನು ಜಿಲ್ಲಾಧಿಕಾರಿ 52 ರೂಪಾಯಿ ನೀಡಿ ಖರೀದಿಸಿದ್ದರು. ಸಾರ್ವಜನಿಕ ಹಣವನ್ನು ವೃಥಾ ವ್ಯರ್ಥ ಮಾಡಲಾಗಿದೆ ಎಂದು ಶಾಸಕ ಸಾ.ರಾ.ಮಹೇಶ್ ಅರೋಪಿಸಿದ್ದರು.
ಕೈಮಗ್ಗ ನಿಗಮದಿಂದ ಖರೀದಿಸಬೇಕಾಗಿದ್ದಂತ ಬಟ್ಟೆ ಬ್ಯಾಗ್ ಗಳನ್ನು ಖಾಸಗಿಯವರಿಂದ 14.71 ಲಕ್ಷ ಬಟ್ಟೆ ಬ್ಯಾಗ್ ಗಳನ್ನು 14 ಕೋಟಿ ಮೊತ್ತಕ್ಕೆ ಖರೀದಿಸಿದ್ದಾರೆ. ಈ ಹಗರಣದಲ್ಲಿ 6.18 ಕೋಟಿ ಅವ್ಯವಹಾರ ನಡೆದಿದೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.